Featured

ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

ಮಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಕಾಮಗಾರಿ ಮಂಜೂರಾತಿಗೆ ಲಂಚ ಕೇಳಿದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಎಂಬಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡದ ಎರಡು ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯ ಟೆಂಡರ್ ಆದಂ ಎಂಬವರು ಅವರ ತಂದೆ ಪರವಾಗಿ ಬಿಡ್ಡ್ ಮಾಡಿದ್ದರು. ತಾಂತ್ರಿಕ ಬಿಡ್ಡನ್ನು ತೆರೆದಾಗ ಕಾಮಗಾರಿಯು ಆದಂ ತಂದೆಯವರಿಗೆ ಮಂಜೂರಾಗಿರುತ್ತದೆ.

ಬಳಿಕ ಸುಮಾರು 10 ದಿನಗಳ ಹಿಂದೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಟೆಕ್ನಿಕಲ್ ಅಸಿಸ್ಟೆಂಟ್ ರವರಾದ ಸೂರ್ಯನಾರಾಯಣ್ ಭಟ್ ರವರು ಮಂಗಳೂರಿನ ಕಛೇರಿಯಿಂದ ಅದೆ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಸುಧೀನ್ ಎಂಬವರ ಮೊಬೈಲ್ ನಿಂದ ಕಾಲ್ ಮಾಡಿ ಈ ನಿಮ್ಮ ಕಾಮಗಾರಿಯ ಫೈನಾನ್ಸಿಯಲ್ ಬಿಡ್ ತೆರೆಯಲು ಟೆಂಡರ್ ಮೊತ್ತದ 1% ಹಣವನ್ನು ಅಂದರೆ ರೂಪಾಯಿ 50,000/- ಸಾವಿರ ಹಣವನ್ನು ಅವರ ಕಛೇರಿಯ ಸೂಪರಿಡೆಂಟ್ ಇಂಜಿನಿಯರ್(S.E) ರವರಾದ ರವೀಂದ್ರ ಕಿಣಿಯವರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. .

ನಂತರ ಮಂಗಳೂರು ಎಸಿಬಿ ಕಛೇರಿಗೆ ಆದಂ ಹೋಗಿ ಮೂವರು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳ ಮಂಗಳೂರು ಮಹಾನಗರದ ಕಟ್ಟಡದಲ್ಲಿ ಈ ಇಬ್ಬರು ಅಧಿಕಾರಿಗಳು ಆದಂ ಅವರ ಬಳಿಯಲ್ಲಿ ಲಂಚ 25,000/- ಸಾವಿರ ಹಣವನ್ನು ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಇಬ್ಬರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago