ಮಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಕಾಮಗಾರಿ ಮಂಜೂರಾತಿಗೆ ಲಂಚ ಕೇಳಿದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಎಂಬಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡದ ಎರಡು ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯ ಟೆಂಡರ್ ಆದಂ ಎಂಬವರು ಅವರ ತಂದೆ ಪರವಾಗಿ ಬಿಡ್ಡ್ ಮಾಡಿದ್ದರು. ತಾಂತ್ರಿಕ ಬಿಡ್ಡನ್ನು ತೆರೆದಾಗ ಕಾಮಗಾರಿಯು ಆದಂ ತಂದೆಯವರಿಗೆ ಮಂಜೂರಾಗಿರುತ್ತದೆ.
ಬಳಿಕ ಸುಮಾರು 10 ದಿನಗಳ ಹಿಂದೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಟೆಕ್ನಿಕಲ್ ಅಸಿಸ್ಟೆಂಟ್ ರವರಾದ ಸೂರ್ಯನಾರಾಯಣ್ ಭಟ್ ರವರು ಮಂಗಳೂರಿನ ಕಛೇರಿಯಿಂದ ಅದೆ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಸುಧೀನ್ ಎಂಬವರ ಮೊಬೈಲ್ ನಿಂದ ಕಾಲ್ ಮಾಡಿ ಈ ನಿಮ್ಮ ಕಾಮಗಾರಿಯ ಫೈನಾನ್ಸಿಯಲ್ ಬಿಡ್ ತೆರೆಯಲು ಟೆಂಡರ್ ಮೊತ್ತದ 1% ಹಣವನ್ನು ಅಂದರೆ ರೂಪಾಯಿ 50,000/- ಸಾವಿರ ಹಣವನ್ನು ಅವರ ಕಛೇರಿಯ ಸೂಪರಿಡೆಂಟ್ ಇಂಜಿನಿಯರ್(S.E) ರವರಾದ ರವೀಂದ್ರ ಕಿಣಿಯವರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. .
ನಂತರ ಮಂಗಳೂರು ಎಸಿಬಿ ಕಛೇರಿಗೆ ಆದಂ ಹೋಗಿ ಮೂವರು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳ ಮಂಗಳೂರು ಮಹಾನಗರದ ಕಟ್ಟಡದಲ್ಲಿ ಈ ಇಬ್ಬರು ಅಧಿಕಾರಿಗಳು ಆದಂ ಅವರ ಬಳಿಯಲ್ಲಿ ಲಂಚ 25,000/- ಸಾವಿರ ಹಣವನ್ನು ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಇಬ್ಬರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…