ಮಂಗಳೂರು,; ೯೪ ಸಿ ಅಡಿ ಜಾಗ ಮಂಜೂರಾತಿಗೆ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮಹಿಳೆಯೊಬ್ಬರ ದೂರಿನ ಮೇರೆಗೆ, ಪುತ್ತಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಮಹಿಳೆಯಿಂದ ೫೦೦೦ ರೂ, ಲಂಚದ ಹಣವನ್ನು ಸ್ವೀಕರಿಸುವಾಗ ಎಪ್ರಿಲ್ ೫ ರಂದು ಎಸಿಬಿ ಪೊಲೀಸರಿಗೆ ರೆಡ್ಹಾಂಡ್ ಆಗಿ ಟ್ರ್ಯಾಪ್ ಆಗಿರುತ್ತಾರೆ.
ಮಹಿಳೆಯು ೯೪-ಸಿ ಅಡಿಯಲ್ಲಿ ಜಾಗ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದು ಸುಮಾರು ಒಂದೂವರೆ ವರ್ಷ ಆದರೂ ಅವರ ಅರ್ಜಿಯನ್ನು ಗ್ರಾಮ ಲೆಕ್ಕಾಧಿಕಾರಿಯವರು ಬಾಕಿ ಇಟ್ಟುಕೊಂಡು ಪ್ರತಿ ಸಲ ಹೋಗಿ ಕೇಳಿದಾಗ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಕಾಲ ವಿಳಂಬ ಮಾಡಿದ್ದರು. ಅರ್ಜಿದಾರರಿಂದ ಈ ಹಿಂದೆ ರೂ ೩.೦೦೦ ಕೆಲಸದ ಪ್ರಯುಕ್ತ ಲಂಚ ಪಡೆದಿದ್ದರು.
ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯ ಪೊಲೀಸ್ ಅಧೀಕ್ಷಕಿ ಶೃತಿ ಎನ್. ಎಸ್., ಇವರ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್ಪಿ ಸುಧೀರ್ ಎಂ ಹೆಗಡೆ ಇವರ ನೇತ್ರೃತ್ವದ ತಂಡದಲ್ಲಿ ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ, ಸಿಬ್ಬಂದಿಯವರಾದ ಹರಿಪ್ರಸಾದ್ ಉಮೇಶ್, ರಾಧಕೃಷ್ಣ, ಪ್ರಶಾಂತ್, ರಾಧಕೃಷ ಡಿ.ಎ, ವೈಶಾಲಿ, ರಾಕೇಶ್, ಗಣೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…