Featured

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ

ಲಂಡನ್ :ಕೋಟ್ಯಂತರ ರೂಪಾಯಿ ಬ್ಯಾಂಕ್ ಹಗರಣ ನಡೆಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಲಂಡನ್ ನ್ಯಾಯಾಲಯದಿಂದ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ.

ಬ್ಯಾಂಕ್ ಆಫ್ ಇಂಡಿಯಾ ದಾಖಲಿಸಿದ್ದ ಸಾಲ ವಸೂಲಾತಿ ಪ್ರಕರಣದಲ್ಲಿ ಬ್ಯಾಂಕ್ ಪರವಾಗಿ ತೀರ್ಪು ಬಂದಿದ್ದು, ನೀರವ್ ಮೋದಿ ಬ್ಯಾಂಕಿಗೆ ಬರೋಬ್ಬರಿ 10.7 ಮಿಲಿಯನ್ ಡಾಲರ್ (ಅಂದರೆ 100 ಕೋಟಿ ರೂಪಾಯಿಗೂ ಹೆಚ್ಚು) ಹಣವನ್ನು ಮರುಪಾವತಿಸಬೇಕು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಈ ಪ್ರಕರಣದಲ್ಲಿ ನೀರವ್ ಮೋದಿ ತಾನೇ ಬರೆದಿದ್ದ ಹಳೆಯ ಇ-ಮೇಲ್‌ನಿಂದಾಗಿ ಕಾನೂನು ಬಲೆಗೆ ಸಿಲುಕಿಕೊಂಡಿದ್ದಾರೆ. ನ್ಯಾಯಾಲಯದಲ್ಲಿ ನೀರವ್ ಮೋದಿ, ಬ್ಯಾಂಕ್ ಸಾಲ ವಸೂಲಾತಿ ಮಾಡುವ ಮುನ್ನ ನನಗೆ ಯಾವುದೇ ಸರಿಯಾದ ನೋಟಿಸ್ ಅಥವಾ ಮಾಹಿತಿ ನೀಡಿಲ್ಲ, ಹಾಗಾಗಿ ನನ್ನ ಪರ್ಸನಲ್ ಗ್ಯಾರಂಟಿ ಬಳಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವಾದಿಸಿದ್ದರು.

ಆದರೆ ನ್ಯಾ. ಸೈಮನ್ ಟಿಂಕ್ಲರ್ ಅವರು ಫೆಬ್ರವರಿ 17, 2018 ರಂದು ನೀರವ್ ಮೋದಿ ಅವರೇ ಬ್ಯಾಂಕಿಗೆ ಬರೆದಿದ್ದ ಇ-ಮೇಲ್ ಒಂದನ್ನು ಕೋರ್ಟ್‌ನಲ್ಲಿ ಪ್ರದರ್ಶಿಸಿ ಅವರ ಸುಳ್ಳನ್ನು ಬಯಲು ಮಾಡಿದರು. ಆ ಇ-ಮೇಲ್‌ನಲ್ಲಿ ನೀರವ್ ಮೋದಿ, ಪಿಎನ್‌ಬಿ ಹಗರಣದ ನಂತರ ನನ್ನ ಇಡೀ ವ್ಯವಹಾರ ತೀವ್ರ ತೊಂದರೆಯಲ್ಲಿದೆ.

ಮಾಧ್ಯಮಗಳ ಒತ್ತಡ ಹಾಗೂ ತನಿಖಾ ಸಂಸ್ಥೆಗಳ ದಾಳಿಯಿಂದಾಗಿ ನನ್ನ ಫೈರ್‌ಸ್ಟಾರ್ ಕಂಪನಿಗಳ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಹೀಗಾಗಿ ನಾನು ಬ್ಯಾಂಕ್ ಸಾಲ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ವತಃ ಬರೆದುಕೊಂಡಿದ್ದರು. ಈ ಮೂಲಕ ತನಗೆ ಪರಿಸ್ಥಿತಿಯ ಸಂಪೂರ್ಣ ಅರಿವಿತ್ತು ಎಂಬುದನ್ನು ಅವರ ಇ-ಮೇಲ್ ಸಾಬೀತುಪಡಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಜುಲೈ 2012 ರಲ್ಲಿ, ಬ್ಯಾಂಕ್ ಆಫ್ ಇಂಡಿಯಾ ನೀರವ್ ಮೋದಿಯ ಫೈರ್‌ಸ್ಟಾರ್ ಗ್ರೂಪ್‌ನ ದುಬೈ ಮೂಲದ ಕಂಪನಿಗೆ ಭಾರಿ ಮೊತ್ತದ ಸಾಲ ನೀಡಿತ್ತು. ಆಗಸ್ಟ್ 2013 ರಲ್ಲಿ ನೀರವ್ ಮೋದಿ, ಒಂದು ವೇಳೆ ಕಂಪನಿ ಸಾಲ ತೀರಿಸದಿದ್ದರೆ ತನ್ನ ವೈಯಕ್ತಿಕ ಆಸ್ತಿಯಿಂದ ಸಾಲ ಮರುಪಾವತಿಸುವುದಾಗಿ ವೈಯಕ್ತಿಕ ಗ್ಯಾರಂಟಿ ದಾಖಲೆಗೆ ಸಹಿ ಹಾಕಿದ್ದರು. 2018 ರಲ್ಲಿ ಹಗರಣ ಬಯಲಾದಾಗ ಬ್ಯಾಂಕ್ ತನ್ನ ಹಣವನ್ನು ವಾಪಸ್ ಕೇಳಿತ್ತು.

ಭಾರತಕ್ಕೆ ಹಸ್ತಾಂತರಿಸುವುದನ್ನು ತಪ್ಪಿಸಲು ಸದ್ಯ ಲಂಡನ್ ಜೈಲಿನಲ್ಲಿರುವ ನೀರವ್ ಮೋದಿ, ಪ್ರಕರಣದಿಂದ ತಪ್ಪಿಸಿಕೊಳ್ಳಲು ಹೂಡಿದ ಮೂರು ತಂತ್ರಗಳನ್ನು ನ್ಯಾಯಮೂರ್ತಿಗಳು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.ಬ್ಯಾಂಕ್ ನೇರವಾಗಿ ನೀರವ್ ಮೋದಿ ಇರುವ ಲಂಡನ್‌ನ ‘ಥೇಮ್‌ಸೈಡ್ ಜೈಲಿ’ಗೇ ನೋಟಿಸ್‌ಗಳನ್ನು ತಲುಪಿಸಿದೆ.

ಪಿಎನ್‌ಬಿ ಹಗರಣದ ಬಳಿಕ ನೀರವ್ ಮೋದಿಯ ಇಡೀ ಕಂಪನಿಯ ಮೌಲ್ಯ ಶೂನ್ಯವಾಗಿದೆ. ಆದ್ದರಿಂದ ತನ್ನ ಹಣವನ್ನು ಭದ್ರಪಡಿಸಿಕೊಳ್ಳಲು ಬ್ಯಾಂಕ್ ಸಾಲ ಮರುಪಾವತಿಗೆ ಒತ್ತಾಯಿಸಿದ್ದು ನೂರಕ್ಕೆ ನೂರು ಸರಿ ಇದೆ ಎಂದು ಕೋರ್ಟ್​ ಹೇಳಿದೆ.

ನೀರವ್ ಮೋದಿ ಅವರು ತಮ್ಮ ವೈಯಕ್ತಿಕ ಖಾತರಿಯಡಿಯಲ್ಲಿ ಬ್ಯಾಂಕಿಗೆ ಅಸಲು ಮೊತ್ತ 4.1 ಮಿಲಿಯನ್ ಡಾಲರ್ (ಸುಮಾರು 38.9 ಕೋಟಿ ರೂ.) ಮತ್ತು ಅದರ ಮೇಲಿನ ಎಲ್ಲಾ ಬಡ್ಡಿಯನ್ನು (ಒಟ್ಟು 100 ಕೋಟಿ ರೂ. ಹೆಚ್ಚು) ತಕ್ಷಣವೇ ಮರುಪಾವತಿಸಲು ನೇರ ಹೊಣೆಗಾರರಾಗಿದ್ದಾರೆ ಎಂದು ನ್ಯಾಯಮೂರ್ತಿಗಳಾದ ಸೈಮನ್ ಟಿಂಕ್ಲರ್ ಅಂತಿಮ ಆದೇಶ ಪ್ರಕಟಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

10 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

11 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

11 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

13 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

13 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

13 hours ago