Featured

ಲಂಡನ್ ನಲ್ಲಿ ನೀರವ್ ಮೋದಿ ಬಂಧನ – Vishwanews24

ಲಂಡನ್​: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ಗೆ ಸಾವಿರಾರು ಕೋಟಿ ರೂಪಾಯಿ ಪಾವತಿಸದೇ ದೇಶ ಬಿಟ್ಟು ಓಡಿಹೋಗಿದ್ದ ವಜ್ರದ ಉದ್ಯಮಿ ನೀರವ್​ ಮೋದಿಯನ್ನು ಲಂಡನ್​ನಲ್ಲಿ ಬಂಧಿಸಲಾಗಿದೆ.

ನೀರವ್​ ಮೋದಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನಿಂದ 13 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೇ ತಲೆತಪ್ಪಿಸಿಕೊಂಡಿದ್ದರು. ಆದರೀಗ ಅವರನ್ನು ಲಂಡನ್​ನಲ್ಲಿ ಬಂಧನ ಮಾಡಲಾಗಿದ್ದು ಭಾರತದ ಜತೆ ಹಸ್ತಾಂತರ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಎಲ್ಲವೂ ಲೆಕ್ಕಾಚಾರಗಳಂತೆ ನಡೆದರೆ ಮದ್ಯ ದೊರೆ ವಿಜಯ್​ ಮಲ್ಯಾ ಸ್ಥಿತಿಯೇ ನೀರವ್​ ಮೋದಿಗೂ ಬರಲಿದೆ.

ಜಾಮೀನು ಕೋರಿ ನೀರವ್​ ಮೋದಿ ಅರ್ಜಿ ಸಲ್ಲಿಸಬಹುದು. ಕೋರ್ಟ್​ ಜಾಮೀನು ನೀಡಿದರೆ ಅವರ ಬಂಧನ ಅಸಾಧ್ಯವಾಗಲಿದೆ. ಇತ್ತೀಚೆಗೆ ಅವರು ಬೆಲೆಬಾಳುವ ಜಾಕೆಟ್​ ಧರಿಸಿ ಲಂಡನ್​ ಬೀದಿಗಳಲ್ಲಿ ಕಾಣಿಸಿಕೊಂಡಿದ್ದರು.

ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನ 13,000 ಕೋಟಿ ರೂ. ಹಗರಣದ ಪ್ರಮುಖ ಆರೋಪಿ ಆಗಿರುವ ನೀರವ್​ ಲಂಡನ್​ನಲ್ಲಿ ತಲೆಮರಿಸಿಕೊಂಡಿದ್ದರು. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂಗತೆ ಭಾರತ ಕೋರಿತ್ತು. ಕೇಂದ್ರ ಗೃಹಸಚಿವಾಲಯದ ಕಾರ್ಯದರ್ಶಿ ಸಾಜಿದ್​ ಜಾವೀದ್​ ದೃಢೀಕರಿಸಿದ ನಂತರದಲ್ಲಿ ಈ ಬೆಳವಣಿಗೆ ನಡೆದಿತ್ತು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಮುಂಬೈ ಬ್ರ್ಯಾಂಚ್​ ಒಂದರಲ್ಲಿ ಬೃಹತ್ ಮೊತ್ತದ ಅವ್ಯವಹಾರ ನಡೆದಿರುವುದನ್ನು ಪತ್ತೆಹಚ್ಚಿತ್ತು. ಸುಮಾರು 1.77 ಬಿಲಿಯನ್ ಡಾಲರ್ (ಸುಮಾರು 13,000 ಕೋಟಿ ರೂ) ಮೊತ್ತದಷ್ಟು ವಂಚನೆ ಎಸಗಲಾಗಿದೆ ಎಂದು ಸಂಸ್ಥೆ ಹೇಳಿತ್ತು. 2018ರ ಆಗಸ್ಟ್​ ತಿಂಗಳಲ್ಲಿ ನೀರವ್​ ಮೋದಿ ಹಸ್ತಾಂತರಕ್ಕೆ ಭಾರತ ಮನವಿ ಮಾಡಿತ್ತು. ಜೊತೆಗೆ ಭಾರತ ಅವರನ್ನು ಗಡೀಪಾರು ಮಾಡುವಂತೆ ಕೋರಿತ್ತು. ಅಕ್ರಮ ಹಣ ವರ್ಗಾವಣೆ ಸೇರಿ ಅನೇಕ ಪ್ರಕರಣಗಳು ಅವರ ಮೇಲಿವೆ. ಇತ್ತೀಚೆಗೆ ಅವರಿಗೆ ಸೇರಿದ ಐಷಾರಾಮಿ ಕಟ್ಟಡವನ್ನು ನೆಲಸಮ ಮಾಡಲಾಗಿತ್ತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago