Featured

ಲಂಡನ್ ನಲ್ಲಿ ನೀರವ್ ಮೋದಿ ಬಂಧನ – Vishwanews24

ಲಂಡನ್​: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ಗೆ ಸಾವಿರಾರು ಕೋಟಿ ರೂಪಾಯಿ ಪಾವತಿಸದೇ ದೇಶ ಬಿಟ್ಟು ಓಡಿಹೋಗಿದ್ದ ವಜ್ರದ ಉದ್ಯಮಿ ನೀರವ್​ ಮೋದಿಯನ್ನು ಲಂಡನ್​ನಲ್ಲಿ ಬಂಧಿಸಲಾಗಿದೆ.

ನೀರವ್​ ಮೋದಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನಿಂದ 13 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೇ ತಲೆತಪ್ಪಿಸಿಕೊಂಡಿದ್ದರು. ಆದರೀಗ ಅವರನ್ನು ಲಂಡನ್​ನಲ್ಲಿ ಬಂಧನ ಮಾಡಲಾಗಿದ್ದು ಭಾರತದ ಜತೆ ಹಸ್ತಾಂತರ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಎಲ್ಲವೂ ಲೆಕ್ಕಾಚಾರಗಳಂತೆ ನಡೆದರೆ ಮದ್ಯ ದೊರೆ ವಿಜಯ್​ ಮಲ್ಯಾ ಸ್ಥಿತಿಯೇ ನೀರವ್​ ಮೋದಿಗೂ ಬರಲಿದೆ.

ಜಾಮೀನು ಕೋರಿ ನೀರವ್​ ಮೋದಿ ಅರ್ಜಿ ಸಲ್ಲಿಸಬಹುದು. ಕೋರ್ಟ್​ ಜಾಮೀನು ನೀಡಿದರೆ ಅವರ ಬಂಧನ ಅಸಾಧ್ಯವಾಗಲಿದೆ. ಇತ್ತೀಚೆಗೆ ಅವರು ಬೆಲೆಬಾಳುವ ಜಾಕೆಟ್​ ಧರಿಸಿ ಲಂಡನ್​ ಬೀದಿಗಳಲ್ಲಿ ಕಾಣಿಸಿಕೊಂಡಿದ್ದರು.

ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನ 13,000 ಕೋಟಿ ರೂ. ಹಗರಣದ ಪ್ರಮುಖ ಆರೋಪಿ ಆಗಿರುವ ನೀರವ್​ ಲಂಡನ್​ನಲ್ಲಿ ತಲೆಮರಿಸಿಕೊಂಡಿದ್ದರು. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂಗತೆ ಭಾರತ ಕೋರಿತ್ತು. ಕೇಂದ್ರ ಗೃಹಸಚಿವಾಲಯದ ಕಾರ್ಯದರ್ಶಿ ಸಾಜಿದ್​ ಜಾವೀದ್​ ದೃಢೀಕರಿಸಿದ ನಂತರದಲ್ಲಿ ಈ ಬೆಳವಣಿಗೆ ನಡೆದಿತ್ತು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಮುಂಬೈ ಬ್ರ್ಯಾಂಚ್​ ಒಂದರಲ್ಲಿ ಬೃಹತ್ ಮೊತ್ತದ ಅವ್ಯವಹಾರ ನಡೆದಿರುವುದನ್ನು ಪತ್ತೆಹಚ್ಚಿತ್ತು. ಸುಮಾರು 1.77 ಬಿಲಿಯನ್ ಡಾಲರ್ (ಸುಮಾರು 13,000 ಕೋಟಿ ರೂ) ಮೊತ್ತದಷ್ಟು ವಂಚನೆ ಎಸಗಲಾಗಿದೆ ಎಂದು ಸಂಸ್ಥೆ ಹೇಳಿತ್ತು. 2018ರ ಆಗಸ್ಟ್​ ತಿಂಗಳಲ್ಲಿ ನೀರವ್​ ಮೋದಿ ಹಸ್ತಾಂತರಕ್ಕೆ ಭಾರತ ಮನವಿ ಮಾಡಿತ್ತು. ಜೊತೆಗೆ ಭಾರತ ಅವರನ್ನು ಗಡೀಪಾರು ಮಾಡುವಂತೆ ಕೋರಿತ್ತು. ಅಕ್ರಮ ಹಣ ವರ್ಗಾವಣೆ ಸೇರಿ ಅನೇಕ ಪ್ರಕರಣಗಳು ಅವರ ಮೇಲಿವೆ. ಇತ್ತೀಚೆಗೆ ಅವರಿಗೆ ಸೇರಿದ ಐಷಾರಾಮಿ ಕಟ್ಟಡವನ್ನು ನೆಲಸಮ ಮಾಡಲಾಗಿತ್ತು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

4 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

4 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago