Featured

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌; ಭಾರತೀಯರಿಂದ ಪ್ರಶಂಸೆ – Vishwanews24

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌;  ಭಾರತೀಯರಿಂದ ಪ್ರಶಂಸೆ

ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ್ದಾರೆ. ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಂಗ್ಲೆಂಡ್‌ನಲ್ಲಿ ವಾಸಿಸುವ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಇತ್ತೀಚೆಗಷ್ಟೇ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಕ್ತಿವೇದಾಂತ ಮೇನರ್ ದೇವಾಲಯಕ್ಕೆ ಪತ್ನಿ ಜೊತೆಗೆ ರಿಷಿ ಸುನಕ್ ಅವರು ಭೇಟಿ ನೀಡಿದ್ದರು. ಇದರ ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ – Vishwanews24 

ಇದೀಗ ರಿಷಿ ಸುನಕ್ ದಂಪತಿ ಗೋಶಾಲೆಗೆ ಭೇಟಿ ನೀಡಿ, ಹಸುವಿನ ಪೂಜೆ ಮಾಡಿದ್ದಾರೆ. ವಿಡಿಯೋದಲ್ಲಿ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ ಗೋಪೂಜೆಗೆ ಸಿದ್ಧವಾಗಿರುವ ಹಸುವಿನ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಪಾತ್ರೆಯಲ್ಲಿದ್ದ ಪವಿತ್ರವಾದ ನೀರನ್ನು ಹಸುವಿನ ಕಾಲಿನ ಮೇಲೆ ಸಿಂಪಡಿಸಿ ನಂತರ ದಂಪತಿ ಆರತಿ ಬೆಳಗಿದ್ದಾರೆ. ಕೊನೆಗೆ ಹಸುವಿಗೆ ಕೈ ಮುಗಿದು ರಿಷಿ ಸುನಕ್ ನಮಸ್ಕರಿಸಿರುವುದನ್ನು ಕಾಣಬಹುದಾಗಿದೆ.

ರಿಷಿ ಸುನಕ್ ಅವರು ಯಾರ್ಕ್‍ಷೈರ್‍ನ ರಿಚ್‍ಮಂಡ್‍ನಿಂದ ಮೂರನೇ ಬಾರಿಗೆ ಮರು ಆಯ್ಕೆಯಾದಾಗ ಭಗವದ್ಗೀತೆಯನ್ನು ಹಿಡಿದುಕೊಂಡು ಇಂಗ್ಲೆಂಡ್‍ನ ಸಂಸತ್ತಿನಲ್ಲಿ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೇ, ಅವರು ಚಾನ್ಸಲರ್ ಆಗಿದ್ದಾಗ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಇಂಗ್ಲೆಂಡ್‍ನಲ್ಲಿರುವ ಭಾರತೀಯರ ಮನಗೆದ್ದಿದ್ದರು.ಇದನ್ನೂ ಓದಿ: ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ : ಚಕ್ರವರ್ತಿ ಸೂಲಿಬೆಲೆ – Vishwanews24 

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago