ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್ನಲ್ಲಿ ಗೋ ಪೂಜೆ ಮಾಡಿದ್ದಾರೆ. ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಂಗ್ಲೆಂಡ್ನಲ್ಲಿ ವಾಸಿಸುವ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಇತ್ತೀಚೆಗಷ್ಟೇ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಕ್ತಿವೇದಾಂತ ಮೇನರ್ ದೇವಾಲಯಕ್ಕೆ ಪತ್ನಿ ಜೊತೆಗೆ ರಿಷಿ ಸುನಕ್ ಅವರು ಭೇಟಿ ನೀಡಿದ್ದರು. ಇದರ ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ – Vishwanews24
ಇದೀಗ ರಿಷಿ ಸುನಕ್ ದಂಪತಿ ಗೋಶಾಲೆಗೆ ಭೇಟಿ ನೀಡಿ, ಹಸುವಿನ ಪೂಜೆ ಮಾಡಿದ್ದಾರೆ. ವಿಡಿಯೋದಲ್ಲಿ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ ಗೋಪೂಜೆಗೆ ಸಿದ್ಧವಾಗಿರುವ ಹಸುವಿನ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಪಾತ್ರೆಯಲ್ಲಿದ್ದ ಪವಿತ್ರವಾದ ನೀರನ್ನು ಹಸುವಿನ ಕಾಲಿನ ಮೇಲೆ ಸಿಂಪಡಿಸಿ ನಂತರ ದಂಪತಿ ಆರತಿ ಬೆಳಗಿದ್ದಾರೆ. ಕೊನೆಗೆ ಹಸುವಿಗೆ ಕೈ ಮುಗಿದು ರಿಷಿ ಸುನಕ್ ನಮಸ್ಕರಿಸಿರುವುದನ್ನು ಕಾಣಬಹುದಾಗಿದೆ.
ರಿಷಿ ಸುನಕ್ ಅವರು ಯಾರ್ಕ್ಷೈರ್ನ ರಿಚ್ಮಂಡ್ನಿಂದ ಮೂರನೇ ಬಾರಿಗೆ ಮರು ಆಯ್ಕೆಯಾದಾಗ ಭಗವದ್ಗೀತೆಯನ್ನು ಹಿಡಿದುಕೊಂಡು ಇಂಗ್ಲೆಂಡ್ನ ಸಂಸತ್ತಿನಲ್ಲಿ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೇ, ಅವರು ಚಾನ್ಸಲರ್ ಆಗಿದ್ದಾಗ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಇಂಗ್ಲೆಂಡ್ನಲ್ಲಿರುವ ಭಾರತೀಯರ ಮನಗೆದ್ದಿದ್ದರು.ಇದನ್ನೂ ಓದಿ: ಹಿಂದೂಧರ್ಮವನ್ನು ಪುನರ್ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ : ಚಕ್ರವರ್ತಿ ಸೂಲಿಬೆಲೆ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…