Featured

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌; ಭಾರತೀಯರಿಂದ ಪ್ರಶಂಸೆ – Vishwanews24

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌;  ಭಾರತೀಯರಿಂದ ಪ್ರಶಂಸೆ

ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ್ದಾರೆ. ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಂಗ್ಲೆಂಡ್‌ನಲ್ಲಿ ವಾಸಿಸುವ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಇತ್ತೀಚೆಗಷ್ಟೇ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಕ್ತಿವೇದಾಂತ ಮೇನರ್ ದೇವಾಲಯಕ್ಕೆ ಪತ್ನಿ ಜೊತೆಗೆ ರಿಷಿ ಸುನಕ್ ಅವರು ಭೇಟಿ ನೀಡಿದ್ದರು. ಇದರ ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ – Vishwanews24 

ಇದೀಗ ರಿಷಿ ಸುನಕ್ ದಂಪತಿ ಗೋಶಾಲೆಗೆ ಭೇಟಿ ನೀಡಿ, ಹಸುವಿನ ಪೂಜೆ ಮಾಡಿದ್ದಾರೆ. ವಿಡಿಯೋದಲ್ಲಿ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ ಗೋಪೂಜೆಗೆ ಸಿದ್ಧವಾಗಿರುವ ಹಸುವಿನ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಪಾತ್ರೆಯಲ್ಲಿದ್ದ ಪವಿತ್ರವಾದ ನೀರನ್ನು ಹಸುವಿನ ಕಾಲಿನ ಮೇಲೆ ಸಿಂಪಡಿಸಿ ನಂತರ ದಂಪತಿ ಆರತಿ ಬೆಳಗಿದ್ದಾರೆ. ಕೊನೆಗೆ ಹಸುವಿಗೆ ಕೈ ಮುಗಿದು ರಿಷಿ ಸುನಕ್ ನಮಸ್ಕರಿಸಿರುವುದನ್ನು ಕಾಣಬಹುದಾಗಿದೆ.

ರಿಷಿ ಸುನಕ್ ಅವರು ಯಾರ್ಕ್‍ಷೈರ್‍ನ ರಿಚ್‍ಮಂಡ್‍ನಿಂದ ಮೂರನೇ ಬಾರಿಗೆ ಮರು ಆಯ್ಕೆಯಾದಾಗ ಭಗವದ್ಗೀತೆಯನ್ನು ಹಿಡಿದುಕೊಂಡು ಇಂಗ್ಲೆಂಡ್‍ನ ಸಂಸತ್ತಿನಲ್ಲಿ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೇ, ಅವರು ಚಾನ್ಸಲರ್ ಆಗಿದ್ದಾಗ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಇಂಗ್ಲೆಂಡ್‍ನಲ್ಲಿರುವ ಭಾರತೀಯರ ಮನಗೆದ್ದಿದ್ದರು.ಇದನ್ನೂ ಓದಿ: ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ : ಚಕ್ರವರ್ತಿ ಸೂಲಿಬೆಲೆ – Vishwanews24 

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

11 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

12 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

12 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

13 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago