Featured

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌; ಭಾರತೀಯರಿಂದ ಪ್ರಶಂಸೆ – Vishwanews24

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌;  ಭಾರತೀಯರಿಂದ ಪ್ರಶಂಸೆ

ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ್ದಾರೆ. ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಂಗ್ಲೆಂಡ್‌ನಲ್ಲಿ ವಾಸಿಸುವ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಇತ್ತೀಚೆಗಷ್ಟೇ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಕ್ತಿವೇದಾಂತ ಮೇನರ್ ದೇವಾಲಯಕ್ಕೆ ಪತ್ನಿ ಜೊತೆಗೆ ರಿಷಿ ಸುನಕ್ ಅವರು ಭೇಟಿ ನೀಡಿದ್ದರು. ಇದರ ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ – Vishwanews24 

ಇದೀಗ ರಿಷಿ ಸುನಕ್ ದಂಪತಿ ಗೋಶಾಲೆಗೆ ಭೇಟಿ ನೀಡಿ, ಹಸುವಿನ ಪೂಜೆ ಮಾಡಿದ್ದಾರೆ. ವಿಡಿಯೋದಲ್ಲಿ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ ಗೋಪೂಜೆಗೆ ಸಿದ್ಧವಾಗಿರುವ ಹಸುವಿನ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಪಾತ್ರೆಯಲ್ಲಿದ್ದ ಪವಿತ್ರವಾದ ನೀರನ್ನು ಹಸುವಿನ ಕಾಲಿನ ಮೇಲೆ ಸಿಂಪಡಿಸಿ ನಂತರ ದಂಪತಿ ಆರತಿ ಬೆಳಗಿದ್ದಾರೆ. ಕೊನೆಗೆ ಹಸುವಿಗೆ ಕೈ ಮುಗಿದು ರಿಷಿ ಸುನಕ್ ನಮಸ್ಕರಿಸಿರುವುದನ್ನು ಕಾಣಬಹುದಾಗಿದೆ.

ರಿಷಿ ಸುನಕ್ ಅವರು ಯಾರ್ಕ್‍ಷೈರ್‍ನ ರಿಚ್‍ಮಂಡ್‍ನಿಂದ ಮೂರನೇ ಬಾರಿಗೆ ಮರು ಆಯ್ಕೆಯಾದಾಗ ಭಗವದ್ಗೀತೆಯನ್ನು ಹಿಡಿದುಕೊಂಡು ಇಂಗ್ಲೆಂಡ್‍ನ ಸಂಸತ್ತಿನಲ್ಲಿ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೇ, ಅವರು ಚಾನ್ಸಲರ್ ಆಗಿದ್ದಾಗ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಇಂಗ್ಲೆಂಡ್‍ನಲ್ಲಿರುವ ಭಾರತೀಯರ ಮನಗೆದ್ದಿದ್ದರು.ಇದನ್ನೂ ಓದಿ: ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ : ಚಕ್ರವರ್ತಿ ಸೂಲಿಬೆಲೆ – Vishwanews24 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago