Featured

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣ : ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ :  ಹೆಚ್.ಕೆ.ಪಾಟೀಲ್ – vishwanews24

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣ : ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ :  ಹೆಚ್.ಕೆ.ಪಾಟೀಲ್

ಬೆಂಗಳೂರು: ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ ಎಂದು ಗದಗ ಉಸ್ತುವಾರಿ ಮತ್ತು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾತನಾಡಿದ ಅವರು, ಕುಟುಂಬದ ಪ್ರಾಮಾಣಿಕತೆಯನ್ನು ನಾನು ಗೌರವಿಸುತ್ತೇವೆ. ಅದು ನಿಧಿ ಅಲ್ಲ ಕುಟುಂಬದ ಬಂಗಾರ ಎಂದು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಅಲ್ಲಿನ ಎಎಸ್‌ಐ ಅಧಿಕಾರಿ ಸಂತೋಷ್ ಗೊಂದಲ ಮೂಡಿಸುತ್ತಿದ್ದಾರೆ. ಅನಗತ್ಯ ಗೊಂದಲ ಉಂಟು ಮಾಡಿದ ಅಧಿಕಾರಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಭೂಮಿಯ ಒಳ ಯಾವುದೇ ಮೌಲ್ಯಯುತವಾದ ವಸ್ತುಗಳು ಸಿಕ್ಕರು ಅದು ಸರ್ಕಾರದ್ದಾಗಿರುತ್ತದೆ. ಜಿಲ್ಲಾ ಆಡಳಿತ ಆ ಬಂಗಾರವನ್ನು ಖಜಾನೆಯಲ್ಲಿ ಭದ್ರವಾಗಿ ಇರಿಸಿದೆ. ಅದು ಆ ಕುಟುಂಬಕ್ಕೆ ಸೇರಿದ್ದಾ? ಆ ಜಾಗದ ಮೂಲ ಮಾಲಿಕರಿಗೆ ಸೇರಿದ್ದ? ರಾಷ್ಟ್ರ ಕೂಟರ ಕಾಲದ್ದ ಚಾಲುಕ್ಯರ ಕಾಲದ್ದ ಎಲ್ಲವೂ ಪರಿಶೀಲನೆ ಮಾಡಲಾಗುತ್ತದೆ ಎಂದರು.

ನಿಧಿ ಅಂದರೆ ಏನು? ಭೂಮಿಯ ಒಳಗೆ ಸಿಕ್ಕಿದ ಬೆಲೆ ಬಾಳುವ ವಸ್ತು ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆ ಕುಟುಂಬದ ಪ್ರಾಮಾಣಿಕತೆ ಯ‌ನ್ನು ನಾವು ಗೌರವಿಸುತ್ತೇವೆ. ಮುಖ್ಯಮಂತ್ರಿಗಳು ಆ ಕುಟುಂಬವನ್ನು ಅಭಿನಂದಿಸಿದ್ದಾರೆ. ಸರ್ಕಾರದ ವತಿಯಿಂದಲೂ ಆ ಕುಟುಂಬವನ್ನು ಗೌರವಿಸುವ ಕೆಲಸ ಮಾಡುತ್ತೇವೆ. ಸಾಂದರ್ಭಿಕವಾಗಿ ಅವರಿಗೆ ಏನು ಗೌರವಿಸಬೇಕೋ ಅದನ್ನ ಗೌರವಿಸುತ್ತೇವೆ ಎಂದಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago