ಲಖನೌ: ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ ಎಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ನ ಸದಸ್ಯರಾದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.
ಲಖನೌದಲ್ಲಿ ಮಾತನಾಡಿದ ಅವರು ಭಾರತ ಶತಮಾನಗಳಿಂದ ಕಂಡ ಕನಸು ನನಸಾಗುತ್ತಿದೆಯಾದ್ರೂ ಜವಾಬ್ದಾರಿ ಮುಗಿಯಿತೆಂದು ಯಾರೂ ಅಂದುಕೊಳ್ಳಬಾರದು. ಮುಂದೆ ಎಷ್ಟು ವರ್ಷಗಳ ಕಾಲ ನಿರ್ಮಾಣಗೊಂಡ ದೇವಾಲಯ ಅದೇ ಸ್ವರೂಪದಲ್ಲಿರಲಿದೆ? ಮತ್ತು ಆ ದೇಗುಲಕ್ಕೆ ಯಾರೊಬ್ಬರೂ ಹಾನಿ ಮಾಡದಂತೆ ತಡೆಯುವುದು ಹೇಗೆ ಎಂಬುದು ನಮ್ಮ ಆಲೋಚನೆಯಾಗಿರಬೇಕು’ ಎಂದು ಅವರು ನುಡಿದಿದ್ದಾರೆ. ನಮ್ಮ ಮಕ್ಕಳು ಹಿಂದೂ ಧರ್ಮದಲ್ಲಿರುವವರೆಗೂ ಹಾಗೂ ಹಿಂದೂಗಳು ಬಹುಸಂಖ್ಯಾತರಾಗಿರುವವರೆಗೂ ರಾಮ ಮಂದಿರ ಹಾಗೇ ಇರಲಿದೆ. ಬುದ್ಧನ ಮೂರ್ತಿ ನಾಶ ಮಾಡಿದ ಆಫ್ಗಾನಿಸ್ತಾನದ ಸ್ಥಿತಿಯನ್ನು ಊಹಿಸಿಕೊಳ್ಳಬಹುದು’ ಎಂದಿದ್ದಾರೆ. ನಾವು ಇಲ್ಲಿ ಶಾಶ್ವತವಾಗಿ ನೆಲೆಸಿರುವುದಿಲ್ಲ. ಆದರೆ ಬದುಕಿರುವಾಗ ಹಿಂದೂ ಹಾಗೂ ಸನಾತನ ಧರ್ಮವನ್ನು ನಮ್ಮ ಮಕ್ಕಳಿಗೆ ದಾಟಿಸಬೇಕು. ನಮ್ಮ ಸಂತತಿಗಳಿಗೆ ಸಂಸ್ಕೃತಿಯನ್ನು ದಾಟಿಸುವ ಮೂಲಕ ಧರ್ಮವನ್ನು ಉಳಿಸಬಹುದು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…