Featured

ಲಗ್ನಪತ್ರಿಕೆ ನೀಡುವ ನೆಪದಲ್ಲಿ ಸುಲಿಗೆ ; ಸಾರ್ವಜನಿಕರಿಂದ ಬಿತ್ತು ಗೂಸಾ- Vishwanews24

ಉಡುಪಿ,: : ಮದುವೆ ಆಮಂತ್ರಣ ನೀಡೋ ನೆಪದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸುಲಿಗೆ ಮಾಡಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಸಾರ್ವಜನಿಕರು ಸಖತ್ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ಜಿ .ಎಂ ರೋಡ್ ಮಸೀದಿ ಬಳಿ‌ ನಡೆದಿದೆ. ಕಾಪು ಮಜೂರಿನ ಮಹಿಳೆ ಫಿರ್ದೋಸ್ (29) ಕಾರ್ಕಳ ಕುಂಟಲಪಾಡಿ ನಿವಾಸಿ ಮಹಮ್ಮದ್ ಆಸೀಫ್ ಬಂಧಿತ ಆರೋಪಿಗಳು.

ಆಸೀಫ್ ಕುಂದಾಪುರ ಜಿ.ಎಂ.ರೋಡ್ ನಿವಾಸಿ ಮೆಹರುನ್ನೀಸಾ(74) ಕುಟುಂಬಕ್ಕೆ ಡ್ರೈವರ್ ಆಗಿದ್ದ. ಹಳೆಯ ಪರಿಚಯದ ನೆಪದಲ್ಲಿ ಕುಟುಂಬದ ಮತ್ತು ಮನೆಯ ಆಗು ಹೋಗುಗಳ ಮಾಹಿತಿಯನ್ನು ತಿಳಿದುಕೊಂಡಿದ್ದ. ಇಂದು ಶುಕ್ರವಾರ ಆದ ಕಾರಣ ಮೆಹರುನ್ನೀಸಾ ಅವರ ಪತಿ ಅಬು ಮಹಮ್ಮದ್ ಮಸೀದಿಗೆ ತೆರಳಿದ್ದರು. ಇದೇ ಸಂದರ್ಭ ಮದುವೆ ಆಮಂತ್ರಣ ಪತ್ರಿಕೆ ಕೊಡೋ ನೆಪದಲ್ಲಿ ಮಧ್ಯಾಹ್ನದ ಹೊತ್ತಿಗೆ ಮನೆಗೆ ಬಂದ ಇಬ್ಬರು ಆರೋಪಿಗಳು ಮೆಹರುನ್ನೀಸಾ ಅವರ ಕೈಯನ್ನು ಕಟ್ಟಿ ಕುತ್ತಿಗೆಯಲ್ಲಿದ್ದ ಚಿನ್ನದ ಒಡವೆಗಳನ್ನು ಸುಲಿಗೆ ಮಾಡಲು ಯತ್ನಿಸಿದ್ದಾರೆ. ಇದೇ ಸಂದರ್ಭ ಮೆಹರುನ್ನೀಸಾ ಬೊಬ್ಬೆಯನ್ನು ಕೇಳಿದ ಸಾರ್ವಜನಿಕರು ಆಗಮಿಸಿ ಇಬ್ಬರಿಗೂ ಚೆನ್ನಾಗಿ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಮಹಿಳೆ ಫಿರ್ದೋಸ್ ಆಸೀಫ್ ಜೊತೆ ಸೇರಿ ತನ್ನ ಪತಿ ಸಮೀರ್ ನನ್ನು ತಮಿಳುನಾಡಿಗೆ ಕರೆದುಕೊಂಡು ಮೋಸದಿಂದ ಕೊಲೆ ಗೈದ ಆರೋಪಿಗಳಾಗಿದ್ದಾರೆ.ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ,ಕಳೆದ ತಿಂಗಳಷ್ಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಇಬ್ಬರು ಸೇರಿ ಈ ಕ್ರತ್ಯ ಎಸಗಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago