ಉಡುಪಿ,: : ಮದುವೆ ಆಮಂತ್ರಣ ನೀಡೋ ನೆಪದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸುಲಿಗೆ ಮಾಡಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಸಾರ್ವಜನಿಕರು ಸಖತ್ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ಜಿ .ಎಂ ರೋಡ್ ಮಸೀದಿ ಬಳಿ ನಡೆದಿದೆ. ಕಾಪು ಮಜೂರಿನ ಮಹಿಳೆ ಫಿರ್ದೋಸ್ (29) ಕಾರ್ಕಳ ಕುಂಟಲಪಾಡಿ ನಿವಾಸಿ ಮಹಮ್ಮದ್ ಆಸೀಫ್ ಬಂಧಿತ ಆರೋಪಿಗಳು.
ಆಸೀಫ್ ಕುಂದಾಪುರ ಜಿ.ಎಂ.ರೋಡ್ ನಿವಾಸಿ ಮೆಹರುನ್ನೀಸಾ(74) ಕುಟುಂಬಕ್ಕೆ ಡ್ರೈವರ್ ಆಗಿದ್ದ. ಹಳೆಯ ಪರಿಚಯದ ನೆಪದಲ್ಲಿ ಕುಟುಂಬದ ಮತ್ತು ಮನೆಯ ಆಗು ಹೋಗುಗಳ ಮಾಹಿತಿಯನ್ನು ತಿಳಿದುಕೊಂಡಿದ್ದ. ಇಂದು ಶುಕ್ರವಾರ ಆದ ಕಾರಣ ಮೆಹರುನ್ನೀಸಾ ಅವರ ಪತಿ ಅಬು ಮಹಮ್ಮದ್ ಮಸೀದಿಗೆ ತೆರಳಿದ್ದರು. ಇದೇ ಸಂದರ್ಭ ಮದುವೆ ಆಮಂತ್ರಣ ಪತ್ರಿಕೆ ಕೊಡೋ ನೆಪದಲ್ಲಿ ಮಧ್ಯಾಹ್ನದ ಹೊತ್ತಿಗೆ ಮನೆಗೆ ಬಂದ ಇಬ್ಬರು ಆರೋಪಿಗಳು ಮೆಹರುನ್ನೀಸಾ ಅವರ ಕೈಯನ್ನು ಕಟ್ಟಿ ಕುತ್ತಿಗೆಯಲ್ಲಿದ್ದ ಚಿನ್ನದ ಒಡವೆಗಳನ್ನು ಸುಲಿಗೆ ಮಾಡಲು ಯತ್ನಿಸಿದ್ದಾರೆ. ಇದೇ ಸಂದರ್ಭ ಮೆಹರುನ್ನೀಸಾ ಬೊಬ್ಬೆಯನ್ನು ಕೇಳಿದ ಸಾರ್ವಜನಿಕರು ಆಗಮಿಸಿ ಇಬ್ಬರಿಗೂ ಚೆನ್ನಾಗಿ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಮಹಿಳೆ ಫಿರ್ದೋಸ್ ಆಸೀಫ್ ಜೊತೆ ಸೇರಿ ತನ್ನ ಪತಿ ಸಮೀರ್ ನನ್ನು ತಮಿಳುನಾಡಿಗೆ ಕರೆದುಕೊಂಡು ಮೋಸದಿಂದ ಕೊಲೆ ಗೈದ ಆರೋಪಿಗಳಾಗಿದ್ದಾರೆ.ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ,ಕಳೆದ ತಿಂಗಳಷ್ಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಇಬ್ಬರು ಸೇರಿ ಈ ಕ್ರತ್ಯ ಎಸಗಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…