ಲೇಹ್: ಸ್ವಾತಂತ್ರ್ಯದಿನದ ಅಮೃತಮಹೋತ್ಸವದ ಅಂಗವಾಗಿ ಹಾಗೂ ಇಂದಿನ ಗಾಂಧಿ ಜಯಂತಿಯ ಸಂದರ್ಭದಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜವನ್ನು ಲಡಾಖ್ನಲ್ಲಿ ಅನಾವರಣಗೊಳಿಸಲಾಯಿತು. 225 ಅಡಿ ಉದ್ದ ಮತ್ತು 150 ಅಡಿ ಅಗಲ ಇರುವ ತ್ರಿವರ್ಣ ಧ್ವಜವನ್ನು ಲೇಹ್ನ ವಿಶಾಲ ಶಿಖರವೊಂದರ ಮೇಲೆ ಸ್ಥಾಪಿಸಲಾಗಿದೆ.
ಈ ತ್ರಿವರ್ಣ ಧ್ವಜವು 1,000 ಕೆಜಿ ತೂಕ ಇದ್ದು, ಮುಂಬೈನ ಖಾದಿ ಡೈಯರ್ಸ್ ಅಂಡ್ ಪ್ರಿಂಟರ್ಸ್ನವರು ಇದನ್ನು ತಯಾರಿಸಿದ್ದಾರೆ. ಲೇಹ್ನಲ್ಲಿ ಕಾರ್ಯನಿರ್ವಹಿಸುವ 57 ಇಂಜಿನಿಯರ್ಸ್ ರೆಜಿಮೆಂಟ್ನವರು ಇದನ್ನು ಮುಂಬೈನಿಂದ ಲಡಾಖ್ಗೆ ತಂದು ಶಿಖರ ಮೇಲೆ ಸ್ಥಾಪಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.
ಈ ಧ್ವಜದ ಅನಾವರಣಕ್ಕಾಗಿ ಇಂದು ಬೆಳಿಗ್ಗೆ ಲೇಹ್ ಪಟ್ಟಣದ ಫೈರ್ ಅಂಡ್ ಫ್ಯೂರಿ ಕೋರ್ ಪ್ರಾಂಗಣದಲ್ಲಿ ವಿಶೇಷ ವೇದಿಕೆ ನಿರ್ಮಿಸಲಾಗಿತ್ತು. ಲಡಾಖ್ನ ಉಪರಾಜ್ಯಪಾಲ ಆರ್.ಕೆ.ಮಾಥುರ್ ಅವರು ವೇದಿಕೆಯಿಂದ ಬಟನ್ ಒತ್ತಿ ಈ ಧ್ವಜದ ವಿದ್ಯುಕ್ತ ಅನಾವರಣ ಮಾಡಿದರು. ವಾಯುಸೇನೆಯ ಹೆಲಿಕಾಪ್ಟರ್ಗಳಿಂದ ಧ್ವಜದ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಭಾರತೀಯ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಮತ್ತು ಹಿರಿಯ ಸೇನಾಧಿಕಾರಿಗಳು ಭಾಗವಹಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…