ಲೇಹ್: ಸ್ವಾತಂತ್ರ್ಯದಿನದ ಅಮೃತಮಹೋತ್ಸವದ ಅಂಗವಾಗಿ ಹಾಗೂ ಇಂದಿನ ಗಾಂಧಿ ಜಯಂತಿಯ ಸಂದರ್ಭದಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜವನ್ನು ಲಡಾಖ್ನಲ್ಲಿ ಅನಾವರಣಗೊಳಿಸಲಾಯಿತು. 225 ಅಡಿ ಉದ್ದ ಮತ್ತು 150 ಅಡಿ ಅಗಲ ಇರುವ ತ್ರಿವರ್ಣ ಧ್ವಜವನ್ನು ಲೇಹ್ನ ವಿಶಾಲ ಶಿಖರವೊಂದರ ಮೇಲೆ ಸ್ಥಾಪಿಸಲಾಗಿದೆ.
ಈ ತ್ರಿವರ್ಣ ಧ್ವಜವು 1,000 ಕೆಜಿ ತೂಕ ಇದ್ದು, ಮುಂಬೈನ ಖಾದಿ ಡೈಯರ್ಸ್ ಅಂಡ್ ಪ್ರಿಂಟರ್ಸ್ನವರು ಇದನ್ನು ತಯಾರಿಸಿದ್ದಾರೆ. ಲೇಹ್ನಲ್ಲಿ ಕಾರ್ಯನಿರ್ವಹಿಸುವ 57 ಇಂಜಿನಿಯರ್ಸ್ ರೆಜಿಮೆಂಟ್ನವರು ಇದನ್ನು ಮುಂಬೈನಿಂದ ಲಡಾಖ್ಗೆ ತಂದು ಶಿಖರ ಮೇಲೆ ಸ್ಥಾಪಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.
ಈ ಧ್ವಜದ ಅನಾವರಣಕ್ಕಾಗಿ ಇಂದು ಬೆಳಿಗ್ಗೆ ಲೇಹ್ ಪಟ್ಟಣದ ಫೈರ್ ಅಂಡ್ ಫ್ಯೂರಿ ಕೋರ್ ಪ್ರಾಂಗಣದಲ್ಲಿ ವಿಶೇಷ ವೇದಿಕೆ ನಿರ್ಮಿಸಲಾಗಿತ್ತು. ಲಡಾಖ್ನ ಉಪರಾಜ್ಯಪಾಲ ಆರ್.ಕೆ.ಮಾಥುರ್ ಅವರು ವೇದಿಕೆಯಿಂದ ಬಟನ್ ಒತ್ತಿ ಈ ಧ್ವಜದ ವಿದ್ಯುಕ್ತ ಅನಾವರಣ ಮಾಡಿದರು. ವಾಯುಸೇನೆಯ ಹೆಲಿಕಾಪ್ಟರ್ಗಳಿಂದ ಧ್ವಜದ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಭಾರತೀಯ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಮತ್ತು ಹಿರಿಯ ಸೇನಾಧಿಕಾರಿಗಳು ಭಾಗವಹಿಸಿದರು.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…