ಲೇಹ್: ಸ್ವಾತಂತ್ರ್ಯದಿನದ ಅಮೃತಮಹೋತ್ಸವದ ಅಂಗವಾಗಿ ಹಾಗೂ ಇಂದಿನ ಗಾಂಧಿ ಜಯಂತಿಯ ಸಂದರ್ಭದಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜವನ್ನು ಲಡಾಖ್ನಲ್ಲಿ ಅನಾವರಣಗೊಳಿಸಲಾಯಿತು. 225 ಅಡಿ ಉದ್ದ ಮತ್ತು 150 ಅಡಿ ಅಗಲ ಇರುವ ತ್ರಿವರ್ಣ ಧ್ವಜವನ್ನು ಲೇಹ್ನ ವಿಶಾಲ ಶಿಖರವೊಂದರ ಮೇಲೆ ಸ್ಥಾಪಿಸಲಾಗಿದೆ.
ಈ ತ್ರಿವರ್ಣ ಧ್ವಜವು 1,000 ಕೆಜಿ ತೂಕ ಇದ್ದು, ಮುಂಬೈನ ಖಾದಿ ಡೈಯರ್ಸ್ ಅಂಡ್ ಪ್ರಿಂಟರ್ಸ್ನವರು ಇದನ್ನು ತಯಾರಿಸಿದ್ದಾರೆ. ಲೇಹ್ನಲ್ಲಿ ಕಾರ್ಯನಿರ್ವಹಿಸುವ 57 ಇಂಜಿನಿಯರ್ಸ್ ರೆಜಿಮೆಂಟ್ನವರು ಇದನ್ನು ಮುಂಬೈನಿಂದ ಲಡಾಖ್ಗೆ ತಂದು ಶಿಖರ ಮೇಲೆ ಸ್ಥಾಪಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.
ಈ ಧ್ವಜದ ಅನಾವರಣಕ್ಕಾಗಿ ಇಂದು ಬೆಳಿಗ್ಗೆ ಲೇಹ್ ಪಟ್ಟಣದ ಫೈರ್ ಅಂಡ್ ಫ್ಯೂರಿ ಕೋರ್ ಪ್ರಾಂಗಣದಲ್ಲಿ ವಿಶೇಷ ವೇದಿಕೆ ನಿರ್ಮಿಸಲಾಗಿತ್ತು. ಲಡಾಖ್ನ ಉಪರಾಜ್ಯಪಾಲ ಆರ್.ಕೆ.ಮಾಥುರ್ ಅವರು ವೇದಿಕೆಯಿಂದ ಬಟನ್ ಒತ್ತಿ ಈ ಧ್ವಜದ ವಿದ್ಯುಕ್ತ ಅನಾವರಣ ಮಾಡಿದರು. ವಾಯುಸೇನೆಯ ಹೆಲಿಕಾಪ್ಟರ್ಗಳಿಂದ ಧ್ವಜದ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಭಾರತೀಯ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಮತ್ತು ಹಿರಿಯ ಸೇನಾಧಿಕಾರಿಗಳು ಭಾಗವಹಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…