Featured

ಲಡಾಖ್​ನಲ್ಲಿ ಖಾದಿಯಿಂದ ತಯಾರಾದ ಅತಿ ದೊಡ್ಡ ಭಾರತ ಧ್ವಜ ಅನಾವರಣ -Vishwanews24

ಲಡಾಖ್​ನಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜ ಅನಾವರಣ -Vishwanews24

ಲೇಹ್​​: ಸ್ವಾತಂತ್ರ್ಯದಿನದ ಅಮೃತಮಹೋತ್ಸವದ ಅಂಗವಾಗಿ ಹಾಗೂ ಇಂದಿನ ಗಾಂಧಿ ಜಯಂತಿಯ ಸಂದರ್ಭದಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜವನ್ನು ಲಡಾಖ್​ನಲ್ಲಿ ಅನಾವರಣಗೊಳಿಸಲಾಯಿತು. 225 ಅಡಿ ಉದ್ದ ಮತ್ತು 150 ಅಡಿ ಅಗಲ ಇರುವ ತ್ರಿವರ್ಣ ಧ್ವಜವನ್ನು ಲೇಹ್​ನ ವಿಶಾಲ ಶಿಖರವೊಂದರ ಮೇಲೆ ಸ್ಥಾಪಿಸಲಾಗಿದೆ.

ಈ ತ್ರಿವರ್ಣ ಧ್ವಜವು 1,000 ಕೆಜಿ ತೂಕ ಇದ್ದು, ಮುಂಬೈನ ಖಾದಿ ಡೈಯರ್ಸ್​ ಅಂಡ್​ ಪ್ರಿಂಟರ್ಸ್​ನವರು ಇದನ್ನು ತಯಾರಿಸಿದ್ದಾರೆ. ಲೇಹ್​ನಲ್ಲಿ ಕಾರ್ಯನಿರ್ವಹಿಸುವ 57 ಇಂಜಿನಿಯರ್ಸ್​ ರೆಜಿಮೆಂಟ್​ನವರು ಇದನ್ನು ಮುಂಬೈನಿಂದ ಲಡಾಖ್​ಗೆ ತಂದು ಶಿಖರ ಮೇಲೆ ಸ್ಥಾಪಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.

ಈ ಧ್ವಜದ ಅನಾವರಣಕ್ಕಾಗಿ ಇಂದು ಬೆಳಿಗ್ಗೆ ಲೇಹ್​ ಪಟ್ಟಣದ ಫೈರ್​ ಅಂಡ್ ಫ್ಯೂರಿ ಕೋರ್​ ಪ್ರಾಂಗಣದಲ್ಲಿ ವಿಶೇಷ ವೇದಿಕೆ ನಿರ್ಮಿಸಲಾಗಿತ್ತು. ಲಡಾಖ್​ನ ಉಪರಾಜ್ಯಪಾಲ ಆರ್​.ಕೆ.ಮಾಥುರ್​ ಅವರು ವೇದಿಕೆಯಿಂದ ಬಟನ್​ ಒತ್ತಿ ಈ ಧ್ವಜದ ವಿದ್ಯುಕ್ತ ಅನಾವರಣ ಮಾಡಿದರು. ವಾಯುಸೇನೆಯ ಹೆಲಿಕಾಪ್ಟರ್​ಗಳಿಂದ ಧ್ವಜದ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಭಾರತೀಯ ಸೇನಾ ಮುಖ್ಯಸ್ಥ ಮನೋಜ್​ ಮುಕುಂದ್​ ನರವಣೆ ಮತ್ತು ಹಿರಿಯ ಸೇನಾಧಿಕಾರಿಗಳು ಭಾಗವಹಿಸಿದರು.

ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ..ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್‌ ಕಳೆದುಕೊಂಡಿದೆ : ಎಚ್‌.ಡಿ. ಕುಮಾರಸ್ವಾಮಿ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago