Featured

ಲವ್‌ ಜೆಹಾದ್‌ ವಿರುದ್ಧ ಉ.ಪ್ರ.ದಲ್ಲಿ ಕಠಿಣ ಕಾನೂನು ; ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು ; 10 ವರ್ಷ ಜೈಲು ಶಿಕ್ಷೆ ಪ್ರಸ್ತಾವ -Vishwanews24

ಲವ್‌ ಜೆಹಾದ್‌ ವಿರುದ್ಧ ಉ.ಪ್ರ.ದಲ್ಲಿ ಕಠಿಣ ಕಾನೂನು ; ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು ; 10 ವರ್ಷ ಜೈಲು ಶಿಕ್ಷೆ ಪ್ರಸ್ತಾವ -Vishwanews24

ಲಕ್ನೊ, : ಮದುವೆಯಾಗುವ ಏಕೈಕ ಉದ್ದೇಶದಿಂದ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಯುವ ಸಲುವಾಗಿ ಉತ್ತರ ಪ್ರದೇಶ ಸರಕಾರ ಅತ್ಯಂತ ಕಠಿಣವಾದ ಕಾನೂನು ಜಾರಿಗೊಳಿಸಿದೆ. ಲವ್‌ ಜೆಹಾದ್‌ ವಿರುದ್ಧ ತರಲಾದ ಕಾನೂನು ಇದು ಎನ್ನಲಾಗಿದೆ. ಬಲವಂತದ ಮತಾಂತರಕ್ಕೆ 10 ವರ್ಷ ಜೈಲು ಶಿಕ್ಷೆ ವಿಧಿಸುವ ಅಂಶ ಈ ಕಾನೂನಿನಲ್ಲಿದೆ.
ಯೋಗಿ ಆದಿತ್ಯನಾಥ ಸರ್ಕಾರ ಕರಡು ಸುಗ್ರೀವಾಜ್ಞೆಗೆ ಅನುಮೋದನೆಯನ್ನು ನೀಡಿದೆ. ವಿಶೇಷವೆಂದರೆ, ಈ ಸುಗ್ರೀವಾಜ್ಞೆಯಲ್ಲಿ ಲವ್‌ ಜೆಹಾದ್‌ ಎಂಬ ಶಬ್ದವನ್ನು ಬಳಸಿಲ್ಲ. ಬದಲಾಗಿ ಕರಡು ಮಸೂದೆಯನ್ನು “ಮತಾಂತರ ತಡೆಯುವ ವಿಧಿ”ಎಂದು ಹೆಸರಿಸಲಾಗಿದೆ.

ಅನ್ಯಧರ್ಮೀಯರನ್ನು ಪ್ರೇಮಿಸಿ ವಿವಾಹವಾಗುವುದಕ್ಕೆ ಧಾರ್ಮಿಕ ಮತಾಂತರವಾಗುವುದನ್ನು ಬಿಜೆಪಿ ನಾಯಕರು ಲವ್ ಜಿಹಾದ್ ಎಂದು ಹೇಳುತ್ತಿದ್ದು, ಅದನ್ನು ತಡೆಗಟ್ಟಲು ಉತ್ತರ ಪ್ರದೇಶ ಸರ್ಕಾರ ಕಠಿಣ ಕಾನೂನನ್ನು ಜಾರಿಗೊಳಿಸಿದೆ.

ಮಂಗಳವಾರ ನಡೆದ ಸಂಪುಟ ಸಭೆ ಈ ಕರಡನ್ನು ಅಂಗೀಕರಿಸಿದೆ. ಮಸೂದೆಯನ್ನು ಮತಾಂತರ ವಿರೋಧಿ ಕಾನೂನು ಎಂದು ಪರಿಗಣಿಸಲಾಗಿದೆ ಮತ್ತು ಇದು ಜನರನ್ನು ಬಲವಂತವಾಗಿ, ಪ್ರೀತಿಯ ನೆಪದಲ್ಲಿ ಅಥವಾ ಬೆದರಿಕೆ ಹಾಕುವ ಮೂಲಕ ಇತರ ಧರ್ಮಗಳಿಗೆ ಪರಿವರ್ತಿಸುವುದನ್ನು ತಡೆಯುತ್ತದೆ.

ಲವ್ ಜಿಹಾದ್ ಎಂಬ ಪದವನ್ನು ಮಸೂದೆಯಲ್ಲಿ ಬಳಸಲಾಗಿಲ್ಲ ಮತ್ತು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದ ಮತಾಂತರಗಳನ್ನು ಹೊಸ ಕಾನೂನಿನ ವ್ಯಾಪ್ತಿಗೆ ತರಲಾಗುವುದು. ನಿಖರವಾಗಿ ಹೇಳಬೇಕೆಂದರೆ, ಅದು ಕೇವಲ ಹಿಂದೂ-ಮುಸ್ಲಿಂ ಮತಾಂತರಗಳು ಅಥವಾ ವಿವಾಹದ ನಿರ್ದಿಷ್ಟ ಉದ್ದೇಶದ ಮತಾಂತರಗಳ ಬಗ್ಗೆ ಗಮನ ಹರಿಸಿಲ್ಲ ಎಂದು ಕಾನೂನು ಆಯೋಗದ ಮುಖ್ಯಸ್ಥ ಜಸ್ಟಿಸ್‌ ಆದಿತ್ಯ ಮಿತ್ತಲ್‌ ಹೇಳಿದ್ದಾರೆ.

ಒಂದು ವೇಳೆ ಸಮುದಾಯವನ್ನೇ ಮತಾಂತರ ಮಾಡಲು ಮುಂದಾದರೆ   3-10 ವರ್ಷ ಜೈಲು ಮತ್ತು50,000 ದಂಡ ವಿಧಿಸಬಹುದಾಗಿದೆ.  ಒಬ್ಬ ವ್ಯಕ್ತಿ ಮತಾಂತರಗೊಂಡು ಮದುವೆಯಾಗಲು ಬಯಸಿದರೆ ಆತ ಸಂಬಂಧಿಸಿದ ಅಧೀಕಾರಿಯ ಅನುಮತಿಯನ್ನು ಮದುವೆಗೂ ಎರಡೂ ತಿಂಗಳು ಮುನ್ನ ಪಡೆದುಕೊಳ್ಳಬೇಕಾಗುವುದು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

58 minutes ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

4 hours ago