ಲಕ್ನೊ, : ಮದುವೆಯಾಗುವ ಏಕೈಕ ಉದ್ದೇಶದಿಂದ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಯುವ ಸಲುವಾಗಿ ಉತ್ತರ ಪ್ರದೇಶ ಸರಕಾರ ಅತ್ಯಂತ ಕಠಿಣವಾದ ಕಾನೂನು ಜಾರಿಗೊಳಿಸಿದೆ. ಲವ್ ಜೆಹಾದ್ ವಿರುದ್ಧ ತರಲಾದ ಕಾನೂನು ಇದು ಎನ್ನಲಾಗಿದೆ. ಬಲವಂತದ ಮತಾಂತರಕ್ಕೆ 10 ವರ್ಷ ಜೈಲು ಶಿಕ್ಷೆ ವಿಧಿಸುವ ಅಂಶ ಈ ಕಾನೂನಿನಲ್ಲಿದೆ.
ಯೋಗಿ ಆದಿತ್ಯನಾಥ ಸರ್ಕಾರ ಕರಡು ಸುಗ್ರೀವಾಜ್ಞೆಗೆ ಅನುಮೋದನೆಯನ್ನು ನೀಡಿದೆ. ವಿಶೇಷವೆಂದರೆ, ಈ ಸುಗ್ರೀವಾಜ್ಞೆಯಲ್ಲಿ ಲವ್ ಜೆಹಾದ್ ಎಂಬ ಶಬ್ದವನ್ನು ಬಳಸಿಲ್ಲ. ಬದಲಾಗಿ ಕರಡು ಮಸೂದೆಯನ್ನು “ಮತಾಂತರ ತಡೆಯುವ ವಿಧಿ”ಎಂದು ಹೆಸರಿಸಲಾಗಿದೆ.
ಅನ್ಯಧರ್ಮೀಯರನ್ನು ಪ್ರೇಮಿಸಿ ವಿವಾಹವಾಗುವುದಕ್ಕೆ ಧಾರ್ಮಿಕ ಮತಾಂತರವಾಗುವುದನ್ನು ಬಿಜೆಪಿ ನಾಯಕರು ಲವ್ ಜಿಹಾದ್ ಎಂದು ಹೇಳುತ್ತಿದ್ದು, ಅದನ್ನು ತಡೆಗಟ್ಟಲು ಉತ್ತರ ಪ್ರದೇಶ ಸರ್ಕಾರ ಕಠಿಣ ಕಾನೂನನ್ನು ಜಾರಿಗೊಳಿಸಿದೆ.
ಮಂಗಳವಾರ ನಡೆದ ಸಂಪುಟ ಸಭೆ ಈ ಕರಡನ್ನು ಅಂಗೀಕರಿಸಿದೆ. ಮಸೂದೆಯನ್ನು ಮತಾಂತರ ವಿರೋಧಿ ಕಾನೂನು ಎಂದು ಪರಿಗಣಿಸಲಾಗಿದೆ ಮತ್ತು ಇದು ಜನರನ್ನು ಬಲವಂತವಾಗಿ, ಪ್ರೀತಿಯ ನೆಪದಲ್ಲಿ ಅಥವಾ ಬೆದರಿಕೆ ಹಾಕುವ ಮೂಲಕ ಇತರ ಧರ್ಮಗಳಿಗೆ ಪರಿವರ್ತಿಸುವುದನ್ನು ತಡೆಯುತ್ತದೆ.
ಲವ್ ಜಿಹಾದ್ ಎಂಬ ಪದವನ್ನು ಮಸೂದೆಯಲ್ಲಿ ಬಳಸಲಾಗಿಲ್ಲ ಮತ್ತು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದ ಮತಾಂತರಗಳನ್ನು ಹೊಸ ಕಾನೂನಿನ ವ್ಯಾಪ್ತಿಗೆ ತರಲಾಗುವುದು. ನಿಖರವಾಗಿ ಹೇಳಬೇಕೆಂದರೆ, ಅದು ಕೇವಲ ಹಿಂದೂ-ಮುಸ್ಲಿಂ ಮತಾಂತರಗಳು ಅಥವಾ ವಿವಾಹದ ನಿರ್ದಿಷ್ಟ ಉದ್ದೇಶದ ಮತಾಂತರಗಳ ಬಗ್ಗೆ ಗಮನ ಹರಿಸಿಲ್ಲ ಎಂದು ಕಾನೂನು ಆಯೋಗದ ಮುಖ್ಯಸ್ಥ ಜಸ್ಟಿಸ್ ಆದಿತ್ಯ ಮಿತ್ತಲ್ ಹೇಳಿದ್ದಾರೆ.
ಒಂದು ವೇಳೆ ಸಮುದಾಯವನ್ನೇ ಮತಾಂತರ ಮಾಡಲು ಮುಂದಾದರೆ 3-10 ವರ್ಷ ಜೈಲು ಮತ್ತು50,000 ದಂಡ ವಿಧಿಸಬಹುದಾಗಿದೆ. ಒಬ್ಬ ವ್ಯಕ್ತಿ ಮತಾಂತರಗೊಂಡು ಮದುವೆಯಾಗಲು ಬಯಸಿದರೆ ಆತ ಸಂಬಂಧಿಸಿದ ಅಧೀಕಾರಿಯ ಅನುಮತಿಯನ್ನು ಮದುವೆಗೂ ಎರಡೂ ತಿಂಗಳು ಮುನ್ನ ಪಡೆದುಕೊಳ್ಳಬೇಕಾಗುವುದು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…