Featured

ಲವ್‌ ಜೆಹಾದ್‌ ವಿರುದ್ಧ ಉ.ಪ್ರ.ದಲ್ಲಿ ಕಠಿಣ ಕಾನೂನು ; ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು ; 10 ವರ್ಷ ಜೈಲು ಶಿಕ್ಷೆ ಪ್ರಸ್ತಾವ -Vishwanews24

ಲವ್‌ ಜೆಹಾದ್‌ ವಿರುದ್ಧ ಉ.ಪ್ರ.ದಲ್ಲಿ ಕಠಿಣ ಕಾನೂನು ; ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು ; 10 ವರ್ಷ ಜೈಲು ಶಿಕ್ಷೆ ಪ್ರಸ್ತಾವ -Vishwanews24

ಲಕ್ನೊ, : ಮದುವೆಯಾಗುವ ಏಕೈಕ ಉದ್ದೇಶದಿಂದ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಯುವ ಸಲುವಾಗಿ ಉತ್ತರ ಪ್ರದೇಶ ಸರಕಾರ ಅತ್ಯಂತ ಕಠಿಣವಾದ ಕಾನೂನು ಜಾರಿಗೊಳಿಸಿದೆ. ಲವ್‌ ಜೆಹಾದ್‌ ವಿರುದ್ಧ ತರಲಾದ ಕಾನೂನು ಇದು ಎನ್ನಲಾಗಿದೆ. ಬಲವಂತದ ಮತಾಂತರಕ್ಕೆ 10 ವರ್ಷ ಜೈಲು ಶಿಕ್ಷೆ ವಿಧಿಸುವ ಅಂಶ ಈ ಕಾನೂನಿನಲ್ಲಿದೆ.
ಯೋಗಿ ಆದಿತ್ಯನಾಥ ಸರ್ಕಾರ ಕರಡು ಸುಗ್ರೀವಾಜ್ಞೆಗೆ ಅನುಮೋದನೆಯನ್ನು ನೀಡಿದೆ. ವಿಶೇಷವೆಂದರೆ, ಈ ಸುಗ್ರೀವಾಜ್ಞೆಯಲ್ಲಿ ಲವ್‌ ಜೆಹಾದ್‌ ಎಂಬ ಶಬ್ದವನ್ನು ಬಳಸಿಲ್ಲ. ಬದಲಾಗಿ ಕರಡು ಮಸೂದೆಯನ್ನು “ಮತಾಂತರ ತಡೆಯುವ ವಿಧಿ”ಎಂದು ಹೆಸರಿಸಲಾಗಿದೆ.

ಅನ್ಯಧರ್ಮೀಯರನ್ನು ಪ್ರೇಮಿಸಿ ವಿವಾಹವಾಗುವುದಕ್ಕೆ ಧಾರ್ಮಿಕ ಮತಾಂತರವಾಗುವುದನ್ನು ಬಿಜೆಪಿ ನಾಯಕರು ಲವ್ ಜಿಹಾದ್ ಎಂದು ಹೇಳುತ್ತಿದ್ದು, ಅದನ್ನು ತಡೆಗಟ್ಟಲು ಉತ್ತರ ಪ್ರದೇಶ ಸರ್ಕಾರ ಕಠಿಣ ಕಾನೂನನ್ನು ಜಾರಿಗೊಳಿಸಿದೆ.

ಮಂಗಳವಾರ ನಡೆದ ಸಂಪುಟ ಸಭೆ ಈ ಕರಡನ್ನು ಅಂಗೀಕರಿಸಿದೆ. ಮಸೂದೆಯನ್ನು ಮತಾಂತರ ವಿರೋಧಿ ಕಾನೂನು ಎಂದು ಪರಿಗಣಿಸಲಾಗಿದೆ ಮತ್ತು ಇದು ಜನರನ್ನು ಬಲವಂತವಾಗಿ, ಪ್ರೀತಿಯ ನೆಪದಲ್ಲಿ ಅಥವಾ ಬೆದರಿಕೆ ಹಾಕುವ ಮೂಲಕ ಇತರ ಧರ್ಮಗಳಿಗೆ ಪರಿವರ್ತಿಸುವುದನ್ನು ತಡೆಯುತ್ತದೆ.

ಲವ್ ಜಿಹಾದ್ ಎಂಬ ಪದವನ್ನು ಮಸೂದೆಯಲ್ಲಿ ಬಳಸಲಾಗಿಲ್ಲ ಮತ್ತು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದ ಮತಾಂತರಗಳನ್ನು ಹೊಸ ಕಾನೂನಿನ ವ್ಯಾಪ್ತಿಗೆ ತರಲಾಗುವುದು. ನಿಖರವಾಗಿ ಹೇಳಬೇಕೆಂದರೆ, ಅದು ಕೇವಲ ಹಿಂದೂ-ಮುಸ್ಲಿಂ ಮತಾಂತರಗಳು ಅಥವಾ ವಿವಾಹದ ನಿರ್ದಿಷ್ಟ ಉದ್ದೇಶದ ಮತಾಂತರಗಳ ಬಗ್ಗೆ ಗಮನ ಹರಿಸಿಲ್ಲ ಎಂದು ಕಾನೂನು ಆಯೋಗದ ಮುಖ್ಯಸ್ಥ ಜಸ್ಟಿಸ್‌ ಆದಿತ್ಯ ಮಿತ್ತಲ್‌ ಹೇಳಿದ್ದಾರೆ.

ಒಂದು ವೇಳೆ ಸಮುದಾಯವನ್ನೇ ಮತಾಂತರ ಮಾಡಲು ಮುಂದಾದರೆ   3-10 ವರ್ಷ ಜೈಲು ಮತ್ತು50,000 ದಂಡ ವಿಧಿಸಬಹುದಾಗಿದೆ.  ಒಬ್ಬ ವ್ಯಕ್ತಿ ಮತಾಂತರಗೊಂಡು ಮದುವೆಯಾಗಲು ಬಯಸಿದರೆ ಆತ ಸಂಬಂಧಿಸಿದ ಅಧೀಕಾರಿಯ ಅನುಮತಿಯನ್ನು ಮದುವೆಗೂ ಎರಡೂ ತಿಂಗಳು ಮುನ್ನ ಪಡೆದುಕೊಳ್ಳಬೇಕಾಗುವುದು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago