ಉಡುಪಿ

‘ಲವ್‌ ಬಾಬಾ’ ಚಿತ್ರದ ನಾಯಕಿಯಾಗಿ ಮಂಗಳಮುಖಿ ಕಾಜಲ್‌

ಉಡುಪಿ: ಮಂಗಳಮುಖಿಯಾಗಿರುವ ಉಡುಪಿಯ ರಂಗಭೂಮಿ ಕಲಾವಿದೆ ಕಾಜಲ್‌ ಅವರು ‘ಲವ್‌ ಬಾಬಾ’ ಚಲನಚಿತ್ರದ ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ ಚಂದನ್‌ ಗೌಡ ಅವರು ತಿಳಿಸಿದ್ದಾರೆ.

ರಂಗಭೂಮಿಯಲ್ಲಿ ಪಳಗಿರುವ ಕಾಜಲ್‌ ಅವರು ಇತ್ತೀಚೆಗೆ ‘ಐಸಿಯು-ನೋಡುವೆ ನಿನ್ನನ್ನೆ’ ನಾಟಕದಲ್ಲಿ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟನೆ ನೀಡಿದ್ದಾರೆ. ಚಲನಚಿತ್ರಗಳಲ್ಲಿ ಈ ಹಿಂದಿನಿಂದಲೂ ಮಂಗಳಮುಖೀಯರನ್ನು ಹೆಚ್ಚಾಗಿ ಹಾಸ್ಯ ಪಾತ್ರಗಳಿಗೆ ಬಳಸಲಾಗುತ್ತಿತ್ತು. ಆದರೆ ಇದೀಗ ಮೊದಲ ಬಾರಿಗೆ ಮಂಗಳಮುಖೀಯೋರ್ವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. 30 ಲ. ರೂ. ಬಜೆಟ್‌ ನ ಈ ಚಿತ್ರದ ಚಿತ್ರೀಕರಣ ಮೈಸೂರು ಮತ್ತು ಮಂಗಳೂರಿನಲ್ಲಿ ನಡೆಯುತ್ತಿದೆ. ಈ ವರ್ಷದಲ್ಲೇ ಚಿತ್ರ ಬಿಡುಗಡೆಗೊಳಿಸಲು ನಿರ್ಧರಿಸಿದ್ದೇವೆ ಎಂದು ಚಂದನ್‌ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಬಾಲ್ಯದ ಕನಸು’
ನಾನು ಮೂಲತಃ ಮಂಡ್ಯದವಳು. ನಾನು ಸಣ್ಣವಳಿರುವಾಗಲೇ ನಟಿ, ರೇಡಿಯೋ ಜಾಕಿಯಾಗಬೇಕು ಎಂಬ ಕನಸಿತ್ತು. ಉಡುಪಿಯ ರಂಗಭೂಮಿ ಸಂಸ್ಥೆಯಲ್ಲಿ ನಾಟಕಗಳಲ್ಲಿ ಅವಕಾಶ ದೊರೆಯಿತು. ಇದು ನನಗೆ ಹೆಚ್ಚು ಗೌರವ ತಂದುಕೊಟ್ಟಿತು. ಇದೀಗ ‘ಲವ್‌ ಬಾಬಾ’ ಚಿತ್ರದಲ್ಲಿ ನನಗೆ ನಾಯಕಿಯಾಗುವ ಅವಕಾಶ ನೀಡಲಾಗಿದೆ. ಈ ಮೂಲಕ ನನ್ನಲ್ಲಿರುವ ಹೆಣ್ಣಿನ ಭಾವನೆಗಳಿಗೆ ಬೆಲೆ ನೀಡಿದಂತಾಗಿದೆ. ಮಂಗಳಮುಖೀಯರಿಗೂ ವಿಶೇಷ ಗೌರವ ದೊರೆತಂತಾಗಿದೆ. ಇದರಿಂದ ತಂಬಾ ಖುಷಿಯಾಗಿದೆ ಎಂದು ನಟಿ ಕಾಜಲ್‌ ಹೇಳಿದರು. ಚಂದನ್‌ ಗೌಡ ಈ ಹಿಂದೆ ‘ಮಳೆಗಾಲ’ ಎಂಬ ಸಿನೆಮಾ ನಿರ್ದೇಶಿಸಿದ್ದರು. ‘ಲವ್‌ ಬಾಬಾ’ ಅವರ ಎರಡನೇ ಚಿತ್ರ. ಇದರಲ್ಲಿ ಉಡುಪಿಯ ಅಬ್ದುಲ್‌ ರೆಹಮಾನ್‌ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅಬ್ದುಲ್‌ ರೆಹಮಾನ್‌, ಕಲಾವಿದ ರವಿ ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago