ಉಡುಪಿ: ಮಂಗಳಮುಖಿಯಾಗಿರುವ ಉಡುಪಿಯ ರಂಗಭೂಮಿ ಕಲಾವಿದೆ ಕಾಜಲ್ ಅವರು ‘ಲವ್ ಬಾಬಾ’ ಚಲನಚಿತ್ರದ ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ ಚಂದನ್ ಗೌಡ ಅವರು ತಿಳಿಸಿದ್ದಾರೆ.
ರಂಗಭೂಮಿಯಲ್ಲಿ ಪಳಗಿರುವ ಕಾಜಲ್ ಅವರು ಇತ್ತೀಚೆಗೆ ‘ಐಸಿಯು-ನೋಡುವೆ ನಿನ್ನನ್ನೆ’ ನಾಟಕದಲ್ಲಿ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟನೆ ನೀಡಿದ್ದಾರೆ. ಚಲನಚಿತ್ರಗಳಲ್ಲಿ ಈ ಹಿಂದಿನಿಂದಲೂ ಮಂಗಳಮುಖೀಯರನ್ನು ಹೆಚ್ಚಾಗಿ ಹಾಸ್ಯ ಪಾತ್ರಗಳಿಗೆ ಬಳಸಲಾಗುತ್ತಿತ್ತು. ಆದರೆ ಇದೀಗ ಮೊದಲ ಬಾರಿಗೆ ಮಂಗಳಮುಖೀಯೋರ್ವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. 30 ಲ. ರೂ. ಬಜೆಟ್ ನ ಈ ಚಿತ್ರದ ಚಿತ್ರೀಕರಣ ಮೈಸೂರು ಮತ್ತು ಮಂಗಳೂರಿನಲ್ಲಿ ನಡೆಯುತ್ತಿದೆ. ಈ ವರ್ಷದಲ್ಲೇ ಚಿತ್ರ ಬಿಡುಗಡೆಗೊಳಿಸಲು ನಿರ್ಧರಿಸಿದ್ದೇವೆ ಎಂದು ಚಂದನ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಬಾಲ್ಯದ ಕನಸು’
ನಾನು ಮೂಲತಃ ಮಂಡ್ಯದವಳು. ನಾನು ಸಣ್ಣವಳಿರುವಾಗಲೇ ನಟಿ, ರೇಡಿಯೋ ಜಾಕಿಯಾಗಬೇಕು ಎಂಬ ಕನಸಿತ್ತು. ಉಡುಪಿಯ ರಂಗಭೂಮಿ ಸಂಸ್ಥೆಯಲ್ಲಿ ನಾಟಕಗಳಲ್ಲಿ ಅವಕಾಶ ದೊರೆಯಿತು. ಇದು ನನಗೆ ಹೆಚ್ಚು ಗೌರವ ತಂದುಕೊಟ್ಟಿತು. ಇದೀಗ ‘ಲವ್ ಬಾಬಾ’ ಚಿತ್ರದಲ್ಲಿ ನನಗೆ ನಾಯಕಿಯಾಗುವ ಅವಕಾಶ ನೀಡಲಾಗಿದೆ. ಈ ಮೂಲಕ ನನ್ನಲ್ಲಿರುವ ಹೆಣ್ಣಿನ ಭಾವನೆಗಳಿಗೆ ಬೆಲೆ ನೀಡಿದಂತಾಗಿದೆ. ಮಂಗಳಮುಖೀಯರಿಗೂ ವಿಶೇಷ ಗೌರವ ದೊರೆತಂತಾಗಿದೆ. ಇದರಿಂದ ತಂಬಾ ಖುಷಿಯಾಗಿದೆ ಎಂದು ನಟಿ ಕಾಜಲ್ ಹೇಳಿದರು. ಚಂದನ್ ಗೌಡ ಈ ಹಿಂದೆ ‘ಮಳೆಗಾಲ’ ಎಂಬ ಸಿನೆಮಾ ನಿರ್ದೇಶಿಸಿದ್ದರು. ‘ಲವ್ ಬಾಬಾ’ ಅವರ ಎರಡನೇ ಚಿತ್ರ. ಇದರಲ್ಲಿ ಉಡುಪಿಯ ಅಬ್ದುಲ್ ರೆಹಮಾನ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅಬ್ದುಲ್ ರೆಹಮಾನ್, ಕಲಾವಿದ ರವಿ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…