Featured

ಲವ್ ಜಿಹಾದ್, ಹಿಜಾಬ್ ವಿವಾದ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿದ್ದಂತಹ ಜಿಲ್ಲೆಯನ್ನು 18ನೇ ಸ್ಥಾನಕ್ಕೆ ದೂಡಿದರು: ಸಿದ್ದರಾಮಯ್ಯ  – Vishwanews24

@ ಪೆನ್ ಬದಲು ತಲವಾರು, ತ್ರಿಶೂಲ, ಚಾಕು, ಚೂರಿ ಕೊಡುತ್ತಾರೆ..

@ ಪ್ರವೀಣ್ ನೆಟ್ಟಾರು ಕೊಲೆಯ ಮಂಪರು ಪರೀಕ್ಷೆ ಮಾಡಿದರೇ ಸಂಸದರೇ ಸಿಕ್ಕಿ ಹಾಕಿಕೊಳ್ಳುವುದರಲ್ಲಿ ಸಂಶಯವಿಲ್ಲ…

@ ಅಧಿಕಾರಕ್ಕೆ ಬಂದ ನಂತರ ಭರವಸೆಗಳನ್ನು ಮರೆತು ಸಮಾಜ ಒಡೆಯುವ ಕೆಲಸಕ್ಕೆ ಬಿಜೆಪಿಯವರು ಮುಂದಾಗುತ್ತಾರೆ..

@ ಅನ್ಯೋನ್ಯವಾಗಿ ಬಾಳಿದ ಜಿಲ್ಲೆಯನ್ನು ಹಿಂದೆ ಬೀಳಲು ಬಿಡಬೇಡಿ ..

ಉಳ್ಳಾಲ: ಲವ್ ಜಿಹಾದ್, ಹಿಜಾಬ್, ಹಲಾಲ್ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿದ್ದಂತಹ ಉಡುಪಿ ಜಿಲ್ಲೆ, ಮಂಗಳೂರು ಜಿಲ್ಲೆ 18ನೇ ಸ್ಥಾನಕ್ಕೆ ದೂಡಿದರು. ಪೆನ್ ಬದಲು ತಲವಾರು, ತ್ರಿಶೂಲ, ಚಾಕು, ಚೂರಿ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಹರೇಕಳ ಕಡವಿನಬಳಿಯ ಯು.ಟಿ. ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ಯೋಚನೆ ಮಾಡಿ. ಅಬ್ಬಕ್ಕನ ನೆಲ ರಣಹೇಡಿಗಳ ನೆಲವಲ್ಲ. ಅನ್ಯೋನ್ಯವಾಗಿ ಕ್ರಿಶ್ಚಿಯನ್, ಹಿಂದೂ, ಮುಸ್ಲಿಮ್ , ಜೈನರು ಬಾಳಿದ ಜಿಲ್ಲೆಯನ್ನು ಹಿಂದೆ ಬೀಳಲು ಬಿಡಬೇಡಿ ಎಂದರು.

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ, ಕೋಮುವಾದ ಇಲ್ಲಿಂದಲೇ ಆರಂಭವಾಗಿದೆ. ಕೋಮುವಾದದ ಬೀಜ ಇಲ್ಲಿನ ಲ್ಯಾಬ್ ನಿಂದಲೇ ಉತ್ಪತ್ತಿಯಾಗುತ್ತಿದೆ. ಪ್ರವೀಣ್ ನೆಟ್ಟಾರು ಕೊಲೆಯ ಮಂಪರು ಪರೀಕ್ಷೆ ಮಾಡಿದರೇ ಸಂಸದರೇ ಸಿಕ್ಕಿ ಹಾಕಿಕೊಳ್ಳುವುದರಲ್ಲಿ ಸಂಶಯವಿಲ್ಲ ಎಂದರು.
ಅಧಿಕಾರಕ್ಕೆ ಬಂದ ನಂತರ ಭರವಸೆಗಳನ್ನು ಮರೆತು ಸಮಾಜ ಒಡೆಯುವ ಕೆಲಸಕ್ಕೆ ಬಿಜೆಪಿಯವರು ಮುಂದಾಗುತ್ತಾರೆ. ಬಹುತ್ವದ ದೇಶ ಎಲ್ಲರೂ ಒಗ್ಗಟ್ಟಿನಲ್ಲಿರುವ ದೇಶ. ಈಗಿನ ಡಬಲ್ ಇಂಜಿನ್ ಸರಕಾರ ಎಲ್ಲವನ್ನೂ ಮುರಿದುಹಾಕಿದೆ. ಜನಸಂಖ್ಯೆಯಲ್ಲಿ ಭಾರತ ವಿಶ್ವದಲ್ಲಿ ನಂ. 1 ಆಗಲಿದೆ. ಎಲ್ಲರಿಗೂ ರಕ್ಷಣೆ ಸಿಗಬೇಕು, ಸಂವಿಧಾನದಲ್ಲಿ ಎಲ್ಲರೂ ಸಮಾನ ಎಂದು ಅಂಬೇಡ್ಕರ್ ಬರೆದುಕೊಟ್ಟಿದ್ದಾರೆ. ಯಾರು ಯಾವ ಧರ್ಮವನ್ನೂ ಅನುಸರಿಸಬಹುದು ಎಂದು ಹೇಳಲಾಗಿದೆ. ಆದರೆ ಸಮಾನ ಅವಕಾಶ, ಸಮಾನ ಹಕ್ಕು ಎಲ್ಲವನ್ನೂ ನಶಿಸಿಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿಯವರಿಗೆ ಅಸಮಾನತೆಯ ಸಮಾಜ ಬೇಕಿದೆ. ಜಾತಿ ವ್ಯವಸ್ಥೆಯನ್ನು ನಿರ್ಮಿಸಿ ಒಂದು ಜಾತಿಯವರನ್ನು ಇನ್ನೊಂದು ಜಾತಿಗೆ ಎತ್ತಿಕಟ್ಟಲು ಸಾಧ್ಯ. ಆರ್ಥಿಕತೆ, ಅಸಮಾನತೆಯಿದ್ದರೆ ದೌರ್ಜನ್ಯ ಮಾಡಲು ಸುಲಭವಾಗುತ್ತದೆ. ಸಂವಿಧಾನ ಬದಲಾವಣೆ ಮಾಡಲು ಹೇಳಿದಂತ ಅನಂತ್ ಕುಮಾರ್ ಹೆಗ್ಡೆ ಗ್ರಾ.ಪಂ ಸದಸ್ಯನಾಗಲೂ ನಾಲಾಯಕ್, ಮೋದಿ, ಶಾ ಅಂತಹವರನ್ನು ಬೆಂಬಲಿಸಿ ಸಂವಿಧಾನ ವಿರೋಧಿಗಳು ಎಂದು ತೋರಿಸಿಕೊಟ್ಟಿದ್ದಾರೆ. ಪರೇಶ್ ಮೇಸ್ತಾ ಸಾವನ್ನು ಕಾಂಗ್ರೆಸ್ ನವರು ಕೊಲೆ ಮಾಡಿದ್ದಾರೆ ಅಂದರು. ತಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಿಬಿಐಗೆ ವಹಿಸಿದ್ದೆ. ಕೊಲೆಯಲ್ಲ ಇದೊಂದು ಆಕಸ್ಮಿಕ ಸಾವು ಎಂದು ವರದಿ ನೀಡಿತು. ಇಂತಹ ಅನೇಕ ಕೊಲೆಗಳನ್ನು ಬೇರೆಯವರ ಮೇಲೆ ಎತ್ತಿಕಟ್ಟುವ ಕೆಲಸ ದ.ಕ ಜಿಲ್ಲೆಯಲ್ಲಿ ಆಗಿದೆ. ಈಗಿನ ಮುಖ್ಯಮಂತ್ರಿ ಏಳು ಕೋಟಿ ಕನ್ನಡಿಗರ ಮುಖ್ಯಮಂತ್ರಿ, ಆರ್ ಎಸ್ ಎಸ್ ಮುಖ್ಯಮಂತ್ರಿಯಲ್ಲ. ಅಲ್ಪಸಂಖ್ಯಾತರ ಕೊಲೆಯಾದ ಮನೆಗೇ ಹೋಗುವುದಿಲ್ಲ. ಸರಕಾರದ ಖಜಾನೆ ಜನರ ತೆರಿಗೆಯಿಂದ ಬರುವ ಆದಾಯವನ್ನು ಒಂದೇ ಕಡೆಗೆ ಪರಿಹಾರ ನೀಡಿ. ಆರ್ ಎಸ್ ಎಸ್ ನವರ ಕೈಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಇರದ ಆರ್ ಎಸ್ ಎಸ್ ನವರು ರಾಷ್ಟ್ರಭಕ್ತಿ ಬಗ್ಗೆ ಮಾತನಾಡಲು ನೈತಿಕತೆಯ ಇಲ್ಲದವರು ಎಂದು ಹೇಳಿದ್ದಾರೆ.

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

34 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

42 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

49 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 hour ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago