ಹಾಸನ : ಲವ್ ಬ್ರೇಕಪ್ ಆದ ಸಿಟ್ಟಿಗೆ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಸುಚಿತ್ರಾ (20) ಎಂದು ಗುರುತಿಸಲಾಗಿದೆ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.
ಇಬ್ಬರು ಇಂಜಿನಿಯರಿಂಗ್ ಒದುತ್ತಿರುವ ವಿಧ್ಯಾರ್ಥಿಗಳಾಗಿದ್ದು, ತೇಜಸ್ ಹಾಗೂ ಸುಚಿತ್ರಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಬ್ರೇಕಪ್ ಆಗಿದೆ. ಈ ನಡುವೆ ಮರು ಸಂಧಾನದ ಮಾತುಕತೆ ಎಂದು ಆಕೆಯನ್ನು ಆಹ್ವಾನಿಸಿದ ಹುಡುಗ ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಇಂದು ಮುಂಜಾನೆ ಯುವತಿಯನ್ನು ಒಂಟಿಯಾಗಿ ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ.
ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಕೂಡಾ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…