ಹಾಸನ : ಲವ್ ಬ್ರೇಕಪ್ ಆದ ಸಿಟ್ಟಿಗೆ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಸುಚಿತ್ರಾ (20) ಎಂದು ಗುರುತಿಸಲಾಗಿದೆ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.
ಇಬ್ಬರು ಇಂಜಿನಿಯರಿಂಗ್ ಒದುತ್ತಿರುವ ವಿಧ್ಯಾರ್ಥಿಗಳಾಗಿದ್ದು, ತೇಜಸ್ ಹಾಗೂ ಸುಚಿತ್ರಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಬ್ರೇಕಪ್ ಆಗಿದೆ. ಈ ನಡುವೆ ಮರು ಸಂಧಾನದ ಮಾತುಕತೆ ಎಂದು ಆಕೆಯನ್ನು ಆಹ್ವಾನಿಸಿದ ಹುಡುಗ ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಇಂದು ಮುಂಜಾನೆ ಯುವತಿಯನ್ನು ಒಂಟಿಯಾಗಿ ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ.
ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಕೂಡಾ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…