Featured

ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ಸಾವು : ನಿರ್ಮಾಪಕ, ನಿರ್ದೇಶಕ ಸೇರಿ ಐವರ ವಿರುದ್ಧ `FIR’ ದಾಖಲು -Vishwanews24

ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ಸಾವು : ನಿರ್ಮಾಪಕ, ನಿರ್ದೇಶಕ ಸೇರಿ ಐವರ ವಿರುದ್ಧ `FIR’ ದಾಖಲು -Vishwanews24

ಬೆಂಗಳೂರು : ಸ್ಯಾಂಡಲ್ ವುಡ್ ನ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾ ನಿರ್ಮಾಪಕ, ನಿರ್ದೇಶಕ ಸೇರಿದಂತೆ ಐದು ಜನರ ವಿರುದ್ಧ ಬಿಡಿದಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಲವ್ ಯೂ ರಚ್ಚು ಸಿನಿಮಾದ ನಿರ್ದೇಶಕ ಶಂಕರ ಎ1, ನಿರ್ಮಾಪಕ ಗುರುದೇಶಪಾಂಡೆ ಎ2 ಆರೋಪಿ, ಸಿನಿಮಾದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3 ಆರೋಪಿ, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಆರೋಪಿ, ಕ್ರೇನ್ ಅಪರೇಟರ ಮಹದೇವ್ ಎ 5 ಆರೋಪಿ ಎಂದು ಬಿಡದಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ನಿರ್ಮಾಪಕ ಗುರುದೇಶ ಪಾಂಡೆ ಹಾಗೂ ಪ್ರೋಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಘಟನೆ ಬಳಿಕ ಪರಾರಿಯಾಗಿದ್ದು, ಬಿಡದಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಲವ್​ ಯೂ ರಚ್ಚು ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಈ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್​ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ಲವ್​​ ಯೂ ರಚ್ಚು ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ (26) ಮೃತಪಟ್ಟಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago