Featured

ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಗುಂಡಿಕ್ಕಿ ಹತ್ಯೆ – vishwanews24

ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಗುಂಡಿಕ್ಕಿ ಹತ್ಯೆ

ಇಸ್ಲಾಮಾಬಾದ್: ಲಷ್ಕರ್-ಎ-ತೊಯ್ಬಾ ಮಾಜಿ ಕಮಾಂಡರ್ ಅಕ್ರಮ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಅಕ್ರಮ್ ಖಾನ್, ಬಜೌರ್ ಜಿಲ್ಲೆಯಲ್ಲಿ ಅಪರಿಚಿತ ದಾಳಿಕೋರರಿಂದ ಗುಂಡಿಕ್ಕಿ ಕೊಲ್ಲಲ್ಪತ್ತಿದ್ದಾನೆ ಎಂದು ಹೇಳಲಾಗಿದೆ.

2018 ರಿಂದ 2020 ರವರೆಗೆ ಎಲ್ಇಟಿ ನೇಮಕಾತಿ ಸೆಲ್ ಅನ್ನು ಮುನ್ನಡೆಸಿದ್ದ ಖಾನ್, ಪಾಕಿಸ್ತಾನದಲ್ಲಿ ಭಾರತ ವಿರೋಧಿ ಭಾಷಣಗಳಿಗೆ ಹೆಸರುವಾಸಿಯಾಗಿದ್ದ. ಅಲ್ಲದೆ ಭಯೋತ್ಪಾದಕ ಗುಂಪಿನ ಪ್ರಸಿದ್ಧ ವ್ಯಕ್ತಿಯಾಗಿದ್ದು, ದೀರ್ಘಕಾಲದವರೆಗೆ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.

ಖಾನ್ ಎಲ್‌ಇಟಿ ನೇಮಕಾತಿ ಸೆಲ್‌ಗೆ ನೇತೃತ್ವ ವಹಿಸಿದ್ದರು, ಈ ವೇಳೆ ಉಗ್ರ ಸಂಘಟನೆಗೆ ಬೇಕಾದ ಯುವಕರನ್ನು ಉದ್ಯೋಗದ ಹೆಸರಲ್ಲಿ ನೇಮಕ ಮಾಡಿಕೊಂಡು ಅವರಿಗೆ ಭಯೋತ್ಪಾದನೆ ಬಗ್ಗೆ ತರಬೇತಿ ಕೊಡುತ್ತಿದ್ದ ಎನ್ನಲಾಗಿದೆ.

ಕಳೆದ ಅಕ್ಟೋಬರ್‌ನಲ್ಲಿ ಪಠಾಣ್‌ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಲತೀಫ್ ಪಾಕಿಸ್ತಾನದ ಗುಜ್ರಾನ್‌ವಾಲಾ ನಗರದಿಂದ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದರು ಮತ್ತು 2016 ರಲ್ಲಿ ಪಠಾಣ್‌ಕೋಟ್ ವಾಯುಪಡೆಯ ನಿಲ್ದಾಣಕ್ಕೆ ನುಸುಳಿದ್ದ ನಾಲ್ವರು ಭಯೋತ್ಪಾದಕರ ಹ್ಯಾಂಡ್ಲರ್ ಕೂಡ ಆಗಿದ್ದ.

Vishwa News 24

Recent Posts

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ – vishwanews24

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ…

8 minutes ago

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಳಗಾವಿ: ಎಸ್‌ಡಿಆರ್‌ಎಫ್‌ ಸಿಪಿಐ  ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ…

18 minutes ago

ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ – vishwanews24

 ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌…

26 minutes ago

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ – vishwanews24

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…

34 minutes ago

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

21 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

21 hours ago