Featured

ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಗುಂಡಿಕ್ಕಿ ಹತ್ಯೆ – vishwanews24

ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಗುಂಡಿಕ್ಕಿ ಹತ್ಯೆ

ಇಸ್ಲಾಮಾಬಾದ್: ಲಷ್ಕರ್-ಎ-ತೊಯ್ಬಾ ಮಾಜಿ ಕಮಾಂಡರ್ ಅಕ್ರಮ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಅಕ್ರಮ್ ಖಾನ್, ಬಜೌರ್ ಜಿಲ್ಲೆಯಲ್ಲಿ ಅಪರಿಚಿತ ದಾಳಿಕೋರರಿಂದ ಗುಂಡಿಕ್ಕಿ ಕೊಲ್ಲಲ್ಪತ್ತಿದ್ದಾನೆ ಎಂದು ಹೇಳಲಾಗಿದೆ.

2018 ರಿಂದ 2020 ರವರೆಗೆ ಎಲ್ಇಟಿ ನೇಮಕಾತಿ ಸೆಲ್ ಅನ್ನು ಮುನ್ನಡೆಸಿದ್ದ ಖಾನ್, ಪಾಕಿಸ್ತಾನದಲ್ಲಿ ಭಾರತ ವಿರೋಧಿ ಭಾಷಣಗಳಿಗೆ ಹೆಸರುವಾಸಿಯಾಗಿದ್ದ. ಅಲ್ಲದೆ ಭಯೋತ್ಪಾದಕ ಗುಂಪಿನ ಪ್ರಸಿದ್ಧ ವ್ಯಕ್ತಿಯಾಗಿದ್ದು, ದೀರ್ಘಕಾಲದವರೆಗೆ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.

ಖಾನ್ ಎಲ್‌ಇಟಿ ನೇಮಕಾತಿ ಸೆಲ್‌ಗೆ ನೇತೃತ್ವ ವಹಿಸಿದ್ದರು, ಈ ವೇಳೆ ಉಗ್ರ ಸಂಘಟನೆಗೆ ಬೇಕಾದ ಯುವಕರನ್ನು ಉದ್ಯೋಗದ ಹೆಸರಲ್ಲಿ ನೇಮಕ ಮಾಡಿಕೊಂಡು ಅವರಿಗೆ ಭಯೋತ್ಪಾದನೆ ಬಗ್ಗೆ ತರಬೇತಿ ಕೊಡುತ್ತಿದ್ದ ಎನ್ನಲಾಗಿದೆ.

ಕಳೆದ ಅಕ್ಟೋಬರ್‌ನಲ್ಲಿ ಪಠಾಣ್‌ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಲತೀಫ್ ಪಾಕಿಸ್ತಾನದ ಗುಜ್ರಾನ್‌ವಾಲಾ ನಗರದಿಂದ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದರು ಮತ್ತು 2016 ರಲ್ಲಿ ಪಠಾಣ್‌ಕೋಟ್ ವಾಯುಪಡೆಯ ನಿಲ್ದಾಣಕ್ಕೆ ನುಸುಳಿದ್ದ ನಾಲ್ವರು ಭಯೋತ್ಪಾದಕರ ಹ್ಯಾಂಡ್ಲರ್ ಕೂಡ ಆಗಿದ್ದ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago