ಬೆಂಗಳೂರು: ಕೇಂದ್ರ ಸರ್ಕಾರವು ಲಸಿಕಾ ನೀತಿಗೆ ಸಂಬಂಧಿಸಿದಂತೆ ಹಲವು ಬಾರಿ ‘ಯೂ-ಟರ್ನ್’ ಹೊಡೆಯುತ್ತಿದ್ದು, ವೃತ್ತದಲ್ಲಿ ತಿರುಗುತ್ತಿರುವಂತೆ ಅನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರವು ಲಸಿಕಾ ನೀತಿಗೆ ಸಂಬಂಧಿಸಿದಂತೆ ಹಲವು ಬಾರಿ ‘ಯೂ-ಟರ್ನ್’ ಹೊಡೆಯುತ್ತಿದ್ದು, ವೃತ್ತದಲ್ಲಿ ತಿರುಗುತ್ತಿರುವಂತೆ ಅನಿಸುತ್ತಿದೆ ರಾಜ್ಯಗಳೋ ಅಥವಾ ಕೇಂದ್ರವೋ? ಉಚಿತವೋ ಅಥವಾ ಹಣ ನೀಡಬೇಕೋ? 45 ಅಥವಾ ಎಲ್ಲರಿಗೂ? ನಮಗೆ ಸರಿಯಾದ ನಿರ್ಧಾರ ಕೈಗೊಳ್ಳುವ ಸರ್ಕಾರ ಬೇಕಿತ್ತು, ಆದರೆ ಇದೇಕೋ ಗೋಜಲಾಗುತ್ತಿದೆ ಎಂದಿದ್ದಾರೆ.
ಇನ್ಮುಂದೆ ಕೇಂದ್ರ ಸರ್ಕಾರವೇ ರಾಜ್ಯ ಸರ್ಕಾರಗಳಿಗೆ ಉಚಿತ ಲಸಿಕೆ ನೀಡಲಿದೆ. ರಾಜ್ಯ ಸರ್ಕಾರಗಳ ಲಸಿಕೆ ಬೇಡಿಕೆಗಳನ್ನು ಕೇಂದ್ರ ಈಡೇರಿಸಲಿದೆ. ಮುಂದಿನ ಎರಡು ವಾರಗಳ ನಂತರ ಲಸಿಕೆಯನ್ನು ನೀಡಲಿದೆ. ರಾಜ್ಯಗಳಿಗೆ ಹಸ್ತಾಂತರಿಸಿದ ಶೇಕಡಾ 25 ರಷ್ಟು ವ್ಯಾಕ್ಸಿನೇಷನ್ ಸಂಗ್ರಹವನ್ನು ಮುಂದೆ ಕೇಂದ್ರ ಸರ್ಕಾರ ವಹಿಸಿಕೊಳ್ಳಲಿದೆ ಎಂದು ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಸೋಮವಾರ ಹೇಳಿದ್ದರು.
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…