ಲಾಕ್-ಡೌನ್ –15000 ಸಾವಿರ ಮಂದಿಗೆ ಅನ್ನದಾನ-500 ಕುಟುಂಬಗಳಿಗೆ ಕಿಟ್ ವಿತರಿಸಿದ ಕೊರಂಗ್ರಪಾಡಿ ಶ್ರೀನಿವಾಸ್ ತಂತ್ರಿ ಮಡುಂಬು.VISHWANEWS24

ಲಾಕ್-ಡೌನ್ 15000 ಸಾವಿರ ಮಂದಿಗೆ ಅನ್ನದಾನ-500 ಕುಟುಂಬಗಳಿಗೆ ಕಿಟ್ ವಿತರಿಸಿದ ಕೊರಂಗ್ರಪಾಡಿ ಶ್ರೀನಿವಾಸ್ ತಂತ್ರಿ ಮಡುಂಬು.

ಕಾಪು: ಕೊರೋನಾ ಲಾಕ್-ಡೌನ್ ಸಮಸ್ಯೆಯಿಂದ ಜನರು ಹಸಿವಿನಿಂದ ಉಳಿಯಬಾರದು ಎಂಬ ದೃಷ್ಟಿಯಿಂದ ಸುಮಾರು 18 ದಿನಗಳಿಂದ ಹದಿನೈದು ಸಾವಿರಕ್ಕೂ ಅಧಿಕ ಜನರಿಗೆ ಅನ್ನದಾನ ಮತ್ತು 500 ಕ್ಕೂ ಅಧಿಕ ಕುಟುಂಬಗಳಿಗೆ ಕೊರಂಗ್ರಪಾಡಿ ಶ್ರೀನಿವಾಸ್ ತಂತ್ರಿ ಮಡುಂಬು ಆಹಾರದ ಕಿಟ್ ವಿತರಿಸಿದ್ದಾರೆ. ಕಾಪು ಕಾರ್ಕಳ ಪಾಂಗಾಳ ಇನ್ನಂಜೆ ಮಲ್ಲಾರು ಸೇರಿದಂತೆ ವಿವಿಧ ಭಾಗದ ಜನರಿಗೆ ಪ್ರತಿನಿತ್ಯ ಉತ್ತಮ ಗುಣಮಟ್ಟದ ರುಚಿ ಶುಚಿಯಾದ ಊಟ ತಯಾರಿಸಿ ಹಂಚ್ಚುವ ಕಾರ್ಯ ತಂತ್ರಿಯವರು ಮಾಡುತ್ತಿದ್ದಾರೆ .

ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಭಗವಂತನ ಕಾರ್ಯ ಎಂಬ ನಿಲುವಿನಿಂದ ಯಾವುದೇ ಪ್ರಚಾರದಲ್ಲಿ ಭಾಗಿಯಾಗದೇತನ್ನ ಸೇವೆ ಮುಂದುವರೆಸುತ್ತಿರುವುದು ಶ್ಲಾಘನೀಯವಾಗಿದೆ.

ಪ್ರತಿದಿನ ಊಟ ತಯಾರಿಸುವಲ್ಲಿ ಕಾಪು ಲಕ್ಷ್ಮೀ ಜನಾರ್ಧನ ದೇಗುಲದ ಪಾಕ ತಜ್ಞರಾದ ಶ್ರೀಧರ್ ಭಟ್ ಮತ್ತು ಕೆ.ಪಿ ಶ್ರೀನಿವಾಸ ತಂತ್ರಿಯವ ಧರ್ಮ ಪತ್ನಿ ದೀಕ್ಷಾ ಸೇರಿದಂತೆ ಕುಟುಂಬ ವರ್ಗದವರು ಹಾಗೂ ಶಿಷ್ಯಂದಿರು ಸಹಕಾರ ನೀಡುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮದ ಜತೆ ಮಾತಾಡಿದ ಅವರು” ಉಡುಪಿ ಅನ್ನಬ್ರಹ್ಮ ಕ್ಷೇತ್ರ ಹಾಗಾಗಿ ನನ್ನ ಗುರುಗಳ ಪ್ರೇರಣೆಯಿಂದ ನಮ್ಮ ಸುತ್ತಾ ಮುತ್ತ ಯಾರು ಕೂಡ ಹಸಿವಿನಿಂದ ಇರಬಾರದು ಹಾಗಾಗಿ ಕೋವಿಡ್೧೯ ನ ಲಾಕ್ ಡೌನ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪ್ರತಿದಿನ ಅನ್ನದಾನ ಮಾಡುವ ಕಾರ್ಯ ಮಾಡುತ್ತಿದ್ದೇವೆ.ಇದು ಪ್ರಚಾರಕ್ಕಾಗಿ ಅಥಾವ ಹೆಸರಿಗೆ ಮಾಡುವುದಲ್ಲ ಜಾತಿ ಮತ ಭೇಧವಿಲ್ಲದೆ ಹಸಿವು ನೀಗಿಸಲು ಗುರುಗಳ ಮಾರ್ಗದರ್ಶನ ಪ್ರಕಾರ ನಮ್ಮದೊಂದು ಸೇವೆ ಮಾಡುತ್ತಿದ್ದೇವೆ ಅದರ ಜತೆಗೆ ಮಧ್ಯಮ ಮತ್ತು ಬಡ ಕುಟುಂಬಗಳಿಗೆ, ರಿಕ್ಷಾ ಚಾಲಕರಿಗೆ, ಆಹಾರ ಧಾನ್ಯದ ಕಿಟಗ ತಯಾರು ಮಾಡಿ ವಿತರಿಸುವ ಕಾರ್ಯ ನಡೆಯುತ್ತಿದೆ ಇದಕ್ಕೆ ಕೆಲವು ಆತ್ಮೀಯರು ೩೦೦ ಕೇಜಿ ಅಕ್ಕಿಯ ಸಹಕಾರ ಮಾಡಿದ್ದಾರೆ, ವೈಯಕ್ತಿಕವಾಗಿ ಸುಮಾರು ಅಂದಾಜು ಐದು ಲಕ್ಷ ರೂಪಾಯಿ ಖರ್ಚು ಇದುವರೆಗೆ ಆಗಿದೆ ಮುಂದಿನ ದಿನವೂ ಕೂಡ ಇದನ್ನು ಮುಂದುವರೆಸುತ್ತೇವೆ ಮತ್ತು ಇದು ಭಗವಂತನ ಸೇವೆ ಮಾಡುವ ಭಾಗ್ಯ ಎಂದರು.ವಿತರಣೆ ಮತ್ತು ಪ್ಯಾಕ್ ಮಾಡುವಲ್ಲಿ ಉಮೇಶ್ ಪೂಜಾರಿ ಹರೀಶ್ ಸೇರಿದಂತೆ ಗ್ರಾಮದ ಪರಿಸರದ ಯುವಕ ಯುವತಿಯರು ಕೈ ಜೋಡಿಸುತ್ತಿದ್ದಾರೆ.\

 

FACEBOOK VIDEO NEWS

YOUTUBE VIDEO NEWS

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago