Featured

ಉಡುಪಿ: ಲಾರಿ ಮಾಲಿಕರ ಕಟ್ಟಡ ಸಾಮಾಗ್ರಿ ಸಾಗಾಟ ಬಂದ್ – ಬಡ ಕೂಲಿ ಕಾರ್ಮಿಕರ ಹೊಟ್ಟೆಗೆ ಒಡೆಯಲು ಮುಂದಾದ ಸರಕಾರ  : ಯಶ್ಪಾಲ್ ಸುವರ್ಣ ಆಕ್ರೋಶ – Vishwanews24

ಲಾರಿ ಮಾಲಿಕರ ಕಟ್ಟಡ ಸಾಮಾಗ್ರಿ ಸಾಗಾಟ ಬಂದ್ – ಬಡ ಕೂಲಿ ಕಾರ್ಮಿಕರ ಹೊಟ್ಟೆಗೆ ಒಡೆಯಲು ಮುಂದಾದ ಸರಕಾರ  : ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ರಾಜ್ಯ ಸರ್ಕಾರದ ದ್ವಂದ್ವ ನಿಲುವು, ರಾಜ್ಯದ ಯಾವುದೇ ಜಿಲ್ಲೆಯಲ್ಲಿಲ್ಲದ ನಿರ್ಬಂಧವನ್ನು ಉಡುಪಿ ಜಿಲ್ಲೆಯ ಲಾರಿ ಚಾಲಕ ಮಾಲಕರಿಗೆ ಹೇರುವ ಮೂಲಕ ಬಡ ಕೂಲಿ ಕಾರ್ಮಿಕರ ಹೊಟ್ಟೆಗೆ ಒಡೆಯಲು ಸರಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಗಣಿ, ಸಾರಿಗೆ ಇಲಾಖೆಯ ಅವೈಜ್ಞಾನಿಕ ನಿಯಮಾವಳಿಗಳ ಮೂಲಕ ಲಾರಿ ಮಾಲೀಕರಿಗೆ ಕಟ್ಟಡ ಸಾಮಾಗ್ರಿಗಳನ್ನು ಪೂರೈಕೆ ಮಾಡಲು ಸಾಧ್ಯವಾಗದೇ ಬಂದ್ ಕರೆ ನೀಡುವ ಮೂಲಕ ಸರಕಾರದ ವೈಫಲ್ಯ ಬಯಲಾಗಿದೆ.

ಕಟ್ಟಡ ನಿರ್ಮಾಣ ಕ್ಷೇತ್ರವನ್ನೇ ಅವಲಂಬಿಸಿರುವ ಬಡ ಕಾರ್ಮಿಕರಿಗೆ ಹಾಗೂ ನಿರ್ಮಾಣ ಕ್ಷೇತ್ರದ ಹಲವಾರು ವ್ಯವಹಾರಗಳಿಗೆ ದೊಡ್ಡ ಹೊಡೆತ ನೀಡಲಿದೆ.

ಸದಾ 5 ಭಾಗ್ಯಗಳ ಬಗ್ಗೆಯೇ ಮಾತನಾಡುತ್ತಿರುವ ಸರಕಾರ ವರ್ಗಾವಣೆ ದಂಧೆ ಹಾಗೂ ಪಕ್ಷದ ಆಂತರಿಕ ಕಚ್ಚಾಟದಿಂದಾಗಿ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ.

ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಮಾಜಿ ಸಚಿವರು, ಮಾಜಿ ಶಾಸಕರ ಭಿನ್ನ ನಿಲುವು, ಸ್ವಪ್ರತಿಷ್ಠೆಗಾಗಿ ಜಿಲ್ಲಾಡಳಿತವನ್ನು ಕೈಗೊಂಬೆಯಾಗಿಸುವ ಪ್ರಯತ್ನದ ಫಲವಾಗಿ ಜನತೆ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಈ ಅವೈಜ್ಞಾನಿಕ ನಿರ್ಬಂಧವನ್ನು ರದ್ದುಮಾಡಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಈ ಜನ ಸಾಮಾನ್ಯರ ಜೊತೆಗೂಡಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago