Featured

ಉಡುಪಿ: ಲಾರಿ ಮಾಲಿಕರ ಕಟ್ಟಡ ಸಾಮಾಗ್ರಿ ಸಾಗಾಟ ಬಂದ್ – ಬಡ ಕೂಲಿ ಕಾರ್ಮಿಕರ ಹೊಟ್ಟೆಗೆ ಒಡೆಯಲು ಮುಂದಾದ ಸರಕಾರ  : ಯಶ್ಪಾಲ್ ಸುವರ್ಣ ಆಕ್ರೋಶ – Vishwanews24

ಲಾರಿ ಮಾಲಿಕರ ಕಟ್ಟಡ ಸಾಮಾಗ್ರಿ ಸಾಗಾಟ ಬಂದ್ – ಬಡ ಕೂಲಿ ಕಾರ್ಮಿಕರ ಹೊಟ್ಟೆಗೆ ಒಡೆಯಲು ಮುಂದಾದ ಸರಕಾರ  : ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ರಾಜ್ಯ ಸರ್ಕಾರದ ದ್ವಂದ್ವ ನಿಲುವು, ರಾಜ್ಯದ ಯಾವುದೇ ಜಿಲ್ಲೆಯಲ್ಲಿಲ್ಲದ ನಿರ್ಬಂಧವನ್ನು ಉಡುಪಿ ಜಿಲ್ಲೆಯ ಲಾರಿ ಚಾಲಕ ಮಾಲಕರಿಗೆ ಹೇರುವ ಮೂಲಕ ಬಡ ಕೂಲಿ ಕಾರ್ಮಿಕರ ಹೊಟ್ಟೆಗೆ ಒಡೆಯಲು ಸರಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಗಣಿ, ಸಾರಿಗೆ ಇಲಾಖೆಯ ಅವೈಜ್ಞಾನಿಕ ನಿಯಮಾವಳಿಗಳ ಮೂಲಕ ಲಾರಿ ಮಾಲೀಕರಿಗೆ ಕಟ್ಟಡ ಸಾಮಾಗ್ರಿಗಳನ್ನು ಪೂರೈಕೆ ಮಾಡಲು ಸಾಧ್ಯವಾಗದೇ ಬಂದ್ ಕರೆ ನೀಡುವ ಮೂಲಕ ಸರಕಾರದ ವೈಫಲ್ಯ ಬಯಲಾಗಿದೆ.

ಕಟ್ಟಡ ನಿರ್ಮಾಣ ಕ್ಷೇತ್ರವನ್ನೇ ಅವಲಂಬಿಸಿರುವ ಬಡ ಕಾರ್ಮಿಕರಿಗೆ ಹಾಗೂ ನಿರ್ಮಾಣ ಕ್ಷೇತ್ರದ ಹಲವಾರು ವ್ಯವಹಾರಗಳಿಗೆ ದೊಡ್ಡ ಹೊಡೆತ ನೀಡಲಿದೆ.

ಸದಾ 5 ಭಾಗ್ಯಗಳ ಬಗ್ಗೆಯೇ ಮಾತನಾಡುತ್ತಿರುವ ಸರಕಾರ ವರ್ಗಾವಣೆ ದಂಧೆ ಹಾಗೂ ಪಕ್ಷದ ಆಂತರಿಕ ಕಚ್ಚಾಟದಿಂದಾಗಿ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ.

ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಮಾಜಿ ಸಚಿವರು, ಮಾಜಿ ಶಾಸಕರ ಭಿನ್ನ ನಿಲುವು, ಸ್ವಪ್ರತಿಷ್ಠೆಗಾಗಿ ಜಿಲ್ಲಾಡಳಿತವನ್ನು ಕೈಗೊಂಬೆಯಾಗಿಸುವ ಪ್ರಯತ್ನದ ಫಲವಾಗಿ ಜನತೆ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಈ ಅವೈಜ್ಞಾನಿಕ ನಿರ್ಬಂಧವನ್ನು ರದ್ದುಮಾಡಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಈ ಜನ ಸಾಮಾನ್ಯರ ಜೊತೆಗೂಡಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago