ಲಾಲಾಜಿಗೆ ಊರಿನ ಅಭಿವೃದ್ಧಿಯ ಕಾಳಜಿಗಿಂತ ತನ್ನ ಬಂಡವಾಳ ಗಟ್ಟಿ ಮಾಡಿಕೊಳ್ಳುವುದೇ ಟೆಂಕ್ಷನ್:ಸೊರಕೆ ಆರೋಪ
ಕಾಮಗಾರಿಯ ಶಿಲಾನ್ಯಾಸ ಆಗಬೇಕಾದರೆ ಫಸ್ಟ್ ಕಮಿಷನ್ ಪೇಮೆಂಟ್ ಲಾಲಾಜಿಗೆ ಕೊಡಬೇಕು
ಕಾಪು: ಮಾಜಿ ಸಚಿವ ಇಲ್ಲಿನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಕಾಪುವಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಇಲ್ಲಿನ ಹಾಲಿ ಬಿಜೆಪಿ ಶಾಸಕ ಲಾಲಾಜಿ ಆರ್ ಮೆಂಡನ್ ವಿರುದ್ಧ ತೀಕ್ಷ್ಣವಾಗಿ ಗುಡುಗಿದರು.
ಲಾಲಾಜಿ ಮೆಂಡನ್ ಅವರು ಕಾಪು ವಿಧಾನಸಭಾ ಕ್ಷೇತ್ರಕ್ಕೆ ಕಿಂಚಿತ್ತು ಪೈಸೆಯ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ ಕಾಂಗ್ರೆಸ್ ಅವಧಿಯಲ್ಲಿ ಮಂಜೂರಾತಿಯಾಗಿದ್ದ ಕಾಮಗಾರಿಗಳನ್ನು ಕೂಡ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಯಾವುದೇ ಟೆಂಡರ್ ಪ್ರಕ್ರಿಯೆ ಮುಗಿದು ಶಿಲನ್ಯಾಸ ಆಗಬೇಕಾದರೆ ಫಸ್ಟ್ ಕಮಿಷನ್ ಪೇಮೆಂಟ್ ಲಾಲಾಜಿಯವರ ಖಾತೆ ಸೇರಬೇಕು ಅದಾದ ನಂತರವೇ ಆ ಭಾಗದಲ್ಲಿ ಶಿಲನ್ಯಾಸವಾಗುತ್ತೆ ಎಂದರು.
ಮಣಿಪುರದಿಂದ ಕುಡಿಯುವ ನೀರಿನ ಯೋಜನೆಗೆ ಮೊದಲು ಅಡ್ಡಿಪಡಿಸಿದವರು ಲಾಲಾಜು ಮತ್ತು ಸಂಘಟಿಕರು ಆದರೆ ಇವತ್ತು ಅದೇ ಯೋಜನೆಯನ್ನು ತನ್ನದೆಂದು ಬಿಂಬಿಸಿಕೊಳ್ಳುತ್ತಿರುವುದು ಉತ್ತರನ ಪೌರುಷವೇ ಸರಿ, ಬೆಳಕು ಪಾಲಿಟೆಕ್ನಿಕ್ ಕಾಲೇಜ್ ಮತ್ತು ಪಿಜಿ ಸೈನ್ಸ್ ಸೆಂಟರ್ ಗೆ ಲಾಲಾಜಿಯವರ ಅವಧಿಯಲ್ಲಿ ಒಂದು ಪೈಸೆಯೂ ಕೂಡ ಬಿಡುಗಡೆಯಾಗಿಲ್ಲ ಮತ್ತು ಅವರಿಗೆ ಸರಿಯಾದ ಈ ಬಗ್ಗೆ ಮಾಹಿತಿಯೂ ಇಲ್ಲ ಸುಳ್ಳು ಸುಳ್ಳಾಗಿ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಪಟ್ಟಿ ಬಿಡುಗಡೆ ಮಾಡುವ ಮುಖಾಂತರ ಚುನಾವಣೆಯ ಸಮಯದಲ್ಲಿ ಜನರನ್ನ ಯಾಮಾರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಕಾಪುವಿನಲ್ಲಿ ಯಾವುದೇ ಕಾಮಗಾರಿ ನಡೆದರೂ ಕೂಡ ಅದು ಈ ಗ್ರಾಮದ ಮತ್ತು ಊರಿನ ಅಭಿವೃದ್ಧಿಯ ಬಗ್ಗೆ ಅಲ್ಲ ಏನಿದ್ದರೂ ಲಾಲಾಜಿಯವರ ಸ್ವಂತ ಬಂಡವಾಳವನ್ನು ಜಾಸ್ತಿ ಮಾಡಿಕೊಳ್ಳಲು ಎಂದು ಅವರು ಗಂಭೀರ ಆರೋಪ ಮಾಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…