ಕಾಪು : ಯಾವುದೇ ಬಂಡಾಯವಿಲ್ಲ. ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ. ಮುಂದೆಯೂ ಬಿಜೆಪಿ ಕ್ಷೇತ್ರವನ್ನಾಗಿ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತೇನೆ ಎಂದು ಬಿಜೆಪಿ ಟಿಕೆಟ್ ವಂಚಿತ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಬಳಿಕ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ ಚರ್ಚೆ ನಡೆಸಿದ್ದು ಅವರೊಂದಿಗಿನ ಮಾತುಕತೆ ಬಳಿಕ ಜಂಟಿ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಕಳೆದ ಬಾರಿಯ ಚುನಾವಣೆಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರು ನನಗೆ ಪೂರ್ಣ ಸಹಕಾರ ನೀಡಿದ್ದರು. ಈ ಬಾರಿ ನಾನು ಅವರ ಜತೆಗಿದ್ದು ಬಿಜೆಪಿಯನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಇಂದಿನಿಂದಲೇ ಪಕ್ಷ ಸಂಘಟನೆ ನಡೆಸಿ, ಪಕ್ಷದ ಗೆಲುವುಗಾಗಿ ಶ್ರಮಿಸಲಿದ್ದೇವೆ ಎಂದರು.
ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಪಿ. ಶೆಟ್ಟಿ ಮಾತನಾಡಿ, ಪಕ್ಷ ಸೋಲುತ್ತಿದ್ದಾಗ ಲಾಲಾಜಿ ಮೆಂಡನ್ ಅವರು ಪಕ್ಷ ಸಂಘಟನೆ ಮಾಡಿರುವ ರೀತಿ ನಮಗೆ ಸ್ಫೂರ್ತಿ. ಶಾಸಕ ಲಾಲಾಜಿ ಮೆಂಡನ್ ಅವರ ಸಾಧನೆ, ತಪಸ್ಸು, ಸಹಕಾರವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಅವರ ನೇತೃತ್ವದಲ್ಲಿ ಮತ್ತೆ ಕಾಪುವಿನಲ್ಲಿ ಗೆಲ್ಲುತ್ತೆವೆ. ಅದಕ್ಕಾಗಿ ಎಲ್ಲರನ್ನು ಜೊತೆಗೂಡಿಸಿಕೊಂಡು ಮುನ್ನಡೆಯುತ್ತೇವೆ ಎಂದರು.
ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪಕ್ಷದ ಮುಖಂಡರಾದ ಮಟ್ಟರು ರತ್ನಾಕರ ಹೆಗ್ಡೆ, ಕುತ್ಯಾರು ನವೀನ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೋಪಾಲ ಕೃಷ್ಣ ರಾವ್, ಸುಧಾಮ ಶೆಟ್ಟಿ ಶರಣ್ ಮಟ್ಟು, ಸತೀಶ್ ಸಾಲಿಯಾನ್, ಸುನಿತಾ ನಾಯಕ್ ಮೊದಲದವರು ಉಪಸ್ಥಿತರಿದ್ದರು
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…