Featured

ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ – vishwanews24

ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್‌ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ ನಡೆದ ಬಳಿಕ ಪರಾರಿಯಾಗಿದ್ದ ಚೇತನ್ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದ ಹಿನ್ನೆಲೆಯಲ್ಲಿ ಅಸ್ವಸ್ಥನಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ವೈದ್ಯರ ಅನುಮತಿ ಮೇರೆಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇದನ್ನೂ ಓದಿ:

ಪ್ರಕರಣದ ಹೆಚ್ಚಿನ ತನಿಖೆ ಅಗತ್ಯವಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಪೊಲೀಸ್ ಕಸ್ಟಡಿಗೆ ಪಡೆದಿದ್ದ ತನಿಖಾಧಿಕಾರಿಗಳು, ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ಸೇರಿದಂತೆ ಅಗತ್ಯ ತನಿಖಾ ಕ್ರಮಗಳನ್ನು ನಡೆಸಿದ್ದರು. ತನಿಖೆಯ ಭಾಗವಾಗಿ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಮಾಹಿತಿಗಳನ್ನು ಸಂಗ್ರಹಿಸಿ, ಕಾನೂನುಬದ್ಧ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಯಿತು.

ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮತ್ತೊಮ್ಮೆ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಅಧಿಕಾರಿಗಳು ಮುಂದುವರಿಸಿದ್ದು, ತನಿಖೆಯ ಪ್ರಗತಿಗೆ ಅನುಗುಣವಾಗಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

Vishwa News 24

Recent Posts

ಶಿರ್ವ: ಸಬ್ ಇನ್‌ಸ್ಪೆಕ್ಟರ್ ಹೆಸರಿನಲ್ಲಿ ಕರೆ ಮಾಡಿ 11 ಲಕ್ಷ ರೂ. ವಂಚನೆ – vishwanews24

ಶಿರ್ವ: ಸಬ್ ಇನ್‌ಸ್ಪೆಕ್ಟರ್ ಹೆಸರಿನಲ್ಲಿ ಕರೆ ಮಾಡಿ 11 ಲಕ್ಷ ರೂ. ವಂಚನೆ ಶಿರ್ವ: ಅಪರಿಚಿತ ವ್ಯಕ್ತಿಗಳು ಮುಂಬಯಿಯ ಸಬ್…

13 minutes ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ ; ರಕ್ತದಾನಿಗಳಿಗೆ ಸನ್ಮಾನ – vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ ; ರಕ್ತದಾನಿಗಳಿಗೆ ಸನ್ಮಾನ ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್…

35 minutes ago

ಸರ್ಕಾರದಿಂದ ಹಂಚಿಕೆಯಾಗಿರುವ ಸೈಟ್‌ನಲ್ಲಿ ಮನೆ ಕಟ್ಟದೇ ಖಾಲಿ ಬಿಟ್ಟರೆ ನಿವೇಶನ ವಾಪಸ್ : ಸಿಎಂ ಎಚ್ಚರಿಕೆ -vishwanews24

ಸರ್ಕಾರದಿಂದ ಹಂಚಿಕೆಯಾಗಿರುವ ಸೈಟ್‌ನಲ್ಲಿ ಮನೆ ಕಟ್ಟದೇ ಖಾಲಿ ಬಿಟ್ಟರೆ ನಿವೇಶನ ವಾಪಸ್ : ಸಿಎಂ. ಎಚ್ಚರಿಕೆ ಬೆಂಗಳೂರು: ಸರ್ಕಾರದಿಂದ ಹಂಚಿಕೆಯಾಗಿರುವ…

43 minutes ago

ಮೂಡುಬಿದಿರೆ : ಸಹೋದರಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಯುವಕ  – vishwanews24

ಮೂಡುಬಿದಿರೆ : ಸಹೋದರಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಯುವಕ  ಮೂಡುಬಿದಿರೆ : ತಾಲೂಕಿನ ಬೆಳುವಾಯಿ ಗ್ರಾಮ…

1 hour ago

ನಿಂದಿಸಿದವರನ್ನು ಕ್ಷಮಿಸಲು ಬಯಸುತ್ತೇನೆ; ವಿದ್ಯಾರ್ಥಿಗಳಿಗೆ ಶಿಕ್ಷೆಯಲ್ಲ, ಮಾರ್ಗದರ್ಶನ ನೀಡಿ: ಪ್ರಧಾನಿ ಮೋದಿ ವೀಡಿಯೊ ಸಂದೇಶ – vishwanews24

ನಿಂದಿಸಿದವರನ್ನು ಕ್ಷಮಿಸಲು ಬಯಸುತ್ತೇನೆ; ವಿದ್ಯಾರ್ಥಿಗಳಿಗೆ ಶಿಕ್ಷೆಯಲ್ಲ, ಮಾರ್ಗದರ್ಶನ ನೀಡಿ: ಪ್ರಧಾನಿ ಮೋದಿ ವೀಡಿಯೊ ಸಂದೇಶ ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ…

2 hours ago

ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ : ಇಂದಿನಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿಗೆ  – vishwanews24

ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ : ಇಂದಿನಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿಗೆ .. ಏನೆಲ್ಲಾ…

2 hours ago