ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಗಾರ್ತಿ, ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(74) ಇಂದು ಲಿಂಗೈಕ್ಯರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.
ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾತೆ ಮಹಾದೇವಿ ಗುರು ಲಿಂಗಾನಂದ ಅವರಿಂದ ಪ್ರಭಾವಿತರಾಗಿ ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿದ್ದರು. ಇವರನ್ನು ಪ್ರಥಮ ಮಹಿಳಾ ಜಗದ್ಗುರು ಎಂದು ಭಕ್ತರು ಗುರುತಿಸಿದ್ದಾರೆ.
ಮಾತೆ ಮಹಾದೇವಿ ಮಾರ್ಚ್ 13, 1946ರಂದು ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದರು. ಇವರ ಮೂಲ ಹೆಸರು ರತ್ನ ಆಗಿದ್ದು, ದೀಕ್ಷೆ ಪಡೆದ ಬಳಿಕ ಮಾತೆ ಮಹಾದೇವಿ ಎಂದು ಗುರುತಿಸಿಕೊಂಡಿದ್ದರು..
ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಮುನ್ನಲೆಗೆ ಬಂದಾಗ ಹೋರಾಟದ ನೇತೃತ್ವ ವಹಿಸಿದ್ದು ಮಾತೆ ಮಹಾದೇವಿಯವರು. ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ಪಡೆಯುವವರೆಗೂ ಹೋರಾಟ ನಡೆಸುವುದಾಗಿ ಮಹಾದೇವಿ ಹೇಳಿದ್ದರು. ಜತೆಗೆ ದೆಹಲಿಯಲ್ಲೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…