ಲಿಂಗಾಯುತರಿಗೆ ಮೀಸಲಾತಿ ನೀಡಿ ಹಿಂದುಳಿದ ವರ್ಗಕ್ಕೆ ಸೇರಿಸಬೇಕು : ಬಸವರಾಜ್ ಹೊರಟ್ಟಿ ಒತ್ತಾಯ -Vishwanews24

ಹುಬ್ಬಳ್ಳಿ: ರಾಜ್ಯದಲ್ಲಿ ಸುಮಾರು 1.18 ಕೋಟಿಯಷ್ಟು ಲಿಂಗಾಯತ ಜನಸಂಖ್ಯೆ ಇದ್ದು, ಸಮಾಜಕ್ಕೆ ಸೌಲಭ್ಯ ನಿಟ್ಟಿನಲ್ಲಿ ಶೇಕಡಾ16-18ರಷ್ಟು ಮೀಸಲಾತಿ ನೀಡಬೇಕು, ಸಮಾಜವನ್ನು ಇತರೆ ಹಿಂದುಳಿದ ವರ್ಗ ಕ್ಕೆ ಸೇರಿಸಬೇಕೆಂದು ವಿಧಾನ ಪರಿಷತ್ತು ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದಿಂದ ಸಮಾಜಕ್ಕೆ ಏನು ಪ್ರಯೋಜನ ಆಗದು.

ನಿಗಮಕ್ಕೆ ವರ್ಷಕ್ಕೆ ಒಂದು ಸಾವಿರ ಕೋಟಿ ರೂಪಾಯಿಗಳು ನೀಡಿದರು, ಸಮಾಜದ ಶೇ.25 ರಷ್ಟು ಜನರಿಗೆ ತಲಾ 3575 ರೂ.ಬರುತ್ತದೆ ಇದರಿಂದ ಏನು ಅಭಿವೃದ್ಧಿ ಸಾಧ್ಯ. ಶೇ.16-18ರಷ್ಟು ಮೀಸಲಾತಿ ನೀಡಿ ಹಿಂದುಳಿದ ವರ್ಗಕ್ಕೆ ಸೇರಿಸಿದರೆ ಸಮಾಜದ ಯುವಕರಿಗೆ ಅನುಕೂಲವಾಗಲಿದೆ ಎಂದರು.

ಈ ಹಿಂದೆ ನಾವು ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನದ ಹೋರಾಟ ಕೈಗೊಂಡಾಗ ಧರ್ಮ ಒಡೆಯುವ, ರಾಜಕೀಯ ಪ್ರೇರಿತ ಪಟ್ಟ ಕಟ್ಟಲಾಯಿತು. ಸೌಲಭ್ಯ ದೊರೆತಿದ್ದರೆ ಸಮಾಜದ ಎಲ್ಲರಿಗೂ ಲಾಭವಾಗುತ್ತಿತ್ತು.

ಈಗಲಾದರೂ ಸಮಾಜ ಎಲ್ಲರೂ ಸೇರಿ ಶೇ.16-18ರಷ್ಟು ಮೀಸಲಾತಿ, ಹಿಂದುಳಿದ ವರ್ಗಕ್ಕೆ ಸೇರಿಸಲು ಸಂಘಟಿತ ಧ್ವನಿ ಮೊಳಗಿಸುವ ಅನಿವಾರ್ಯತೆ ಇದೆ ಎಂದರು.

ರಾಜ್ಯ ಸರ್ಕಾರದ ಸಾವಯವ ಕೃಷಿ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ . 69 ಲಕ್ಷ ರೈತರಿಗೆ ಲಾಭ ವಾಗಿದೆ ಎಂದು ದಾಖಲೆಗಳು ಹೇಳುತ್ತಿವೆ.ಆದರೆ ವಾಸ್ತವ ಬೇರೆಯದ್ದೇ ಆಗಿದೆ.ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಹೊರಟ್ಟಿ ಒತ್ತಾಯಿಸಿದರು.

Vishwa News 24

Recent Posts

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

5 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

22 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

27 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

34 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago