ಹುಬ್ಬಳ್ಳಿ: ರಾಜ್ಯದಲ್ಲಿ ಸುಮಾರು 1.18 ಕೋಟಿಯಷ್ಟು ಲಿಂಗಾಯತ ಜನಸಂಖ್ಯೆ ಇದ್ದು, ಸಮಾಜಕ್ಕೆ ಸೌಲಭ್ಯ ನಿಟ್ಟಿನಲ್ಲಿ ಶೇಕಡಾ16-18ರಷ್ಟು ಮೀಸಲಾತಿ ನೀಡಬೇಕು, ಸಮಾಜವನ್ನು ಇತರೆ ಹಿಂದುಳಿದ ವರ್ಗ ಕ್ಕೆ ಸೇರಿಸಬೇಕೆಂದು ವಿಧಾನ ಪರಿಷತ್ತು ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದಿಂದ ಸಮಾಜಕ್ಕೆ ಏನು ಪ್ರಯೋಜನ ಆಗದು.
ನಿಗಮಕ್ಕೆ ವರ್ಷಕ್ಕೆ ಒಂದು ಸಾವಿರ ಕೋಟಿ ರೂಪಾಯಿಗಳು ನೀಡಿದರು, ಸಮಾಜದ ಶೇ.25 ರಷ್ಟು ಜನರಿಗೆ ತಲಾ 3575 ರೂ.ಬರುತ್ತದೆ ಇದರಿಂದ ಏನು ಅಭಿವೃದ್ಧಿ ಸಾಧ್ಯ. ಶೇ.16-18ರಷ್ಟು ಮೀಸಲಾತಿ ನೀಡಿ ಹಿಂದುಳಿದ ವರ್ಗಕ್ಕೆ ಸೇರಿಸಿದರೆ ಸಮಾಜದ ಯುವಕರಿಗೆ ಅನುಕೂಲವಾಗಲಿದೆ ಎಂದರು.
ಈ ಹಿಂದೆ ನಾವು ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನದ ಹೋರಾಟ ಕೈಗೊಂಡಾಗ ಧರ್ಮ ಒಡೆಯುವ, ರಾಜಕೀಯ ಪ್ರೇರಿತ ಪಟ್ಟ ಕಟ್ಟಲಾಯಿತು. ಸೌಲಭ್ಯ ದೊರೆತಿದ್ದರೆ ಸಮಾಜದ ಎಲ್ಲರಿಗೂ ಲಾಭವಾಗುತ್ತಿತ್ತು.
ಈಗಲಾದರೂ ಸಮಾಜ ಎಲ್ಲರೂ ಸೇರಿ ಶೇ.16-18ರಷ್ಟು ಮೀಸಲಾತಿ, ಹಿಂದುಳಿದ ವರ್ಗಕ್ಕೆ ಸೇರಿಸಲು ಸಂಘಟಿತ ಧ್ವನಿ ಮೊಳಗಿಸುವ ಅನಿವಾರ್ಯತೆ ಇದೆ ಎಂದರು.
ರಾಜ್ಯ ಸರ್ಕಾರದ ಸಾವಯವ ಕೃಷಿ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ . 69 ಲಕ್ಷ ರೈತರಿಗೆ ಲಾಭ ವಾಗಿದೆ ಎಂದು ದಾಖಲೆಗಳು ಹೇಳುತ್ತಿವೆ.ಆದರೆ ವಾಸ್ತವ ಬೇರೆಯದ್ದೇ ಆಗಿದೆ.ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಹೊರಟ್ಟಿ ಒತ್ತಾಯಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…