ಭೋಪಾಲ್ : ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ವಿವಾಹಿತ ವ್ಯಕ್ತಿಯೋರ್ವ ಲಿವ್- ಇನ್ ಸಂಬಂಧದಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಆಕೆಯ ಮೃತದೇಹವನ್ನು 8 ತಿಂಗಳ ಕಾಲ ಫ್ರಿಡ್ಜ್ ನಲ್ಲಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಸಂಜಯ್ ಪಾಟಿದಾರ್ ಎಂಬಾತ ಈ ಕೃತ್ಯವನ್ನು ಎಸಗಿದ್ದು, ಸಂತ್ರಸ್ತೆಯನ್ನು ಪಿಂಕಿ ಪ್ರಜಾಪತಿ ಎಂದು ಗುರುತಿಸಲಾಗಿದೆ. ಸಂಜಯ್ ಬಾಡಿಗೆಗೆ ಪಡೆದಿದ್ದ ಮನೆಯ ಫ್ರಿಡ್ಜ್ ನಲ್ಲಿ ಸೀರೆಯುಟ್ಟು, ಆಭರಣ ಧರಿಸಿದ್ದ ಮಹಿಳೆಯ ಕೊಳೆತ ಮೃತದೇಹ ಪತ್ತೆಯಾಗಿದೆ. ಮೃತದೇಹದ ಕೈಗಳನ್ನು ಕತ್ತಿಗೆ ಕಟ್ಟಿಹಾಕಲಾಗಿತ್ತು.
ಕಳೆದ ಜೂನ್ ನಲ್ಲಿ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಜ್ಜಯಿನಿ ನಿವಾಸಿ ಸಂಜಯ್ ಪಾಟಿದಾರ್ ಕಳೆದ ಐದು ವರ್ಷಗಳಿಂದ ಪಿಂಕಿ ಪ್ರಜಾಪತಿ ಜೊತೆ ಲಿವ್- ಇನ್ ಸಂಬಂಧದಲ್ಲಿದ್ದು, ಆಕೆ ತನ್ನನ್ನು ವಿವಾಹವಾಗುವಂತೆ ಪಾಟಿದಾರ್ ಗೆ ಒತ್ತಾಯಿಸಿದ್ದಾಳೆ. ಇದರಿಂದಾಗಿ ಪಾಟಿದಾರ್ ತನ್ನ ಸ್ನೇಹಿತನ ಸಹಾಯದಿಂದ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ʼಯುವತಿಯನ್ನು ಜೂನ್ 2024ರಲ್ಲಿ ಕೊಲೆ ಮಾಡಿರುವ ಶಂಕೆಯಿದೆ. ಮನೆಯಿಂದ ದುರ್ವಾಸನೆ ಹೊರಬರಲು ಪ್ರಾರಂಭಿಸಿದ ಬಳಿಕ ನೆರೆಹೊರೆಯವರು ಮನೆಯ ಮಾಲಕರಿಗೆ ಮಾಹಿತಿ ನೀಡಿದ್ದಾರೆ. ಮಾಲಕ ಬಂದು ಪರಿಶೀಲನೆ ನಡೆಸಿದಾಗ ಮಹಿಳೆಯ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆʼ ಎಂದು ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೃತದೇಹ ಪತ್ತೆಯಾದ ಮನೆ ಇಂದೋರ್ ನಲ್ಲಿ ವಾಸಿಸುವ ಧೀರೇಂದ್ರ ಶ್ರೀವಾಸ್ತವ ಅವರ ಮಾಲಕತ್ವದಲ್ಲಿದೆ. ಜೂನ್ 2023ರಲ್ಲಿ ಪಾಟಿದಾರ್ ಈ ಮನೆಯನ್ನು ಬಾಡಿಗೆಗೆ ಪಡೆದುಕೊಂಡಿದ್ದ. ಇತ್ತೀಚೆಗೆ ಪಾಟಿದಾರ್ ಮನೆಯನ್ನು ಬಿಟ್ಟಿದ್ದ. ಆದರೆ ಆತನ ವಸ್ತುಗಳು ಅಲ್ಲೇ ಇದ್ದವು. ಪಾಟಿದಾರ್ ಮನೆಗೆ ಅಪರೂಪಕ್ಕೆ ಬಂದು ಹೋಗುತ್ತಿದ್ದ ಎಂದು ಪುನೀತ್ ಗೆಹ್ಲೋಟ್ ಹೇಳಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…