ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ.
ವಿಚಾರಣೆಗೆಂದು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಗೆ ಹಾಜರುಪಡಿಸಿದ ವೇಳೆ ವಿಜಯ್ ಬಾಬು ಅವರನ್ನು ಬಂಧಿಸಲಾಯಿತು. ಜೂನ್ 22ರಂದು ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.
ನಟಿಯೊಬ್ಬರು ಸಿನಿಮಾ ಪಾತ್ರಗಳನ್ನು ನೀಡುವ ಕುರಿತಾಗಿ ಹೇಳಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದರು.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸುವ ವೇಳೆ ಕೇರಳ ಹೈಕೋರ್ಟ್, ರಾಜ್ಯವನ್ನು ತೊರೆಯದಂತೆ ಮತ್ತು ಅವರ ಪಾಸ್ಪೋರ್ಟ್ ಸಲ್ಲಿಸುವಂತೆ ಹೇಳಿದೆ.
ಸೋಮವಾರದಿಂದ ಜುಲೈ 3ರವರೆಗೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿಚಾರಣೆ ನಡೆಸಲು ತನಿಖಾ ತಂಡಕ್ಕೆ ಅನುಮತಿ ನೀಡಲಾಗಿದೆ. ನಿನ್ನೆ, ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಅವರಿಗೆ ಬೆಂಬಲವನ್ನು ನೀಡಿತು, ನ್ಯಾಯಾಲಯದ ತೀರ್ಪಿನ ನಂತರವೇ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…