Featured

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಎಚ್‌.ಡಿ. ರೇವಣ್ಣಗೆ ಬಿಗ್ ರಿಲೀಫ್ – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಎಚ್‌.ಡಿ. ರೇವಣ್ಣಗೆ ಬಿಗ್ ರಿಲೀಫ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್‌ ಹೊಳೆನರಸೀಪುರ ಶಾಸಕ ಎಚ್‌.ಡಿ. ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

2024ರಲ್ಲಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ರೇವಣ್ಣ ಅವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಆರೋಪವನ್ನು ವಿಶೇಷ ನ್ಯಾಯಾಲಯವು ಕೈಬಿಟ್ಟಿದೆ.

ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ನಗರದ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ಕೆ.ಎನ್‌. ಶಿವಕುಮಾರ್ ಅವರು ನಿರಾಕರಿಸಿದ್ದು, ಎಚ್.ಡಿ. ರೇವಣ್ಣ ಅವರ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶಿಸಿದ್ದಾರೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಎಚ್.ಡಿ. ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ‌ಮಾಡಲಾಗಿದೆ. ಆದರೆ, ಈ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿದ್ದು, ಈ ವಿಳಂಬವನ್ನು ಮನ್ನಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಎಚ್‌.ಡಿ. ರೇವಣ್ಣ ವಿರುದ್ಧದ ಆರೋಪಗಳನ್ನು ಕೈಬಿಟ್ಟಿದೆ.

ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ. ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏಪ್ರಿಲ್‌ 28ರಂದು ಪ್ರಕರಣ ದಾಖಲಾಗಿತ್ತು.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 hour ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

3 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago