ತಿರುವನಂತಪುರಂ: ಮಲಯಾಳಂನ ಬೆಂಗಳೂರು ಡೇಸ್, ಪ್ರೇಮಂ ಮೊದಲಾದ ಹಿಟ್ ಸಿನೆಮಾಗಳ ನಾಯಕ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ.
ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ, ಮಲಯಾಳಂ ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.
ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎರ್ನಾಕುಲಂನ ಊನುಕಲ್ ಪೊಲೀಸರು ಟಿಎನ್ಎಂಗೆ ಖಚಿತಪಡಿಸಿದ್ದಾರೆ.
ದೂರಿನಲ್ಲಿ ಏನಿದೆ?
2023ರ ನವೆಂಬರ್ ತಿಂಗಳಲ್ಲಿ ದುಬೈನ ಹೋಟೆಲೊಂದರಲ್ಲಿ ಈ ಘಟನೆ ನಡೆದಿದೆ. ದೂರು ನೀಡಿದ ಯುವತಿ ಬೇರೆ ಕೆಲಸದ ನಿಮಿತ್ತ ದುಬೈಗೆ ತೆರಳಿದ್ದರು. ಯುವತಿಯ ಸ್ನೇಹಿತೆ ಮೂಲಕ ಈಕೆ ಚಿತ್ರ ತಂಡದ ಬಳಿಗೆ ತೆರಳಿದ್ದರು ಎನ್ನಲಾಗಿದೆ.
ಯುವತಿ ತನ್ನನ್ನು ಕರೆದೊಯ್ದ ಮಹಿಳೆಯನ್ನು ಮೊದಲ ಆರೋಪಿ ಎಂದು ದೂರಿನಲ್ಲಿ ಹೇಳಿದ್ದಾರೆ. ಎಕೆ ಸುನಿಲ್, ಬಿನು, ಬಶೀರ್, ಕುಟ್ಟನ್ ಹಾಗೂ 6ನೇ ಆರೋಪಿ ನಿವಿನ್ ಪೌಲಿ ಎಂದು ದೂರು ದಾಖಲಿಸಿದ್ದಾರೆ.
ಮಾದಕದ್ರವ್ಯ ನೀಡಿ ದೌರ್ಜನ್ಯ ನಡೆಸಿದ್ದಾರೆ. 6 ದಿನಗಳ ಕಾಲ ಹೋಟೆಲ್ನಲ್ಲಿ ಕೂಡಿ ಹಾಕಿ ಈ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ದೂರು ದಾಖಲಾದ ಬೆನ್ನಲ್ಲೇ ನವಿನ್ ಪೌಲಿ ಸ್ಪಷ್ಟನೆ ನೀಡಿದ್ದಾರೆ. ನನ್ನ ವಿರುದ್ದ ನೀಡಿರುವ ದೂರು ಸುಳ್ಳು. ನಾನು ತಪ್ಪು ಮಾಡಿಲ್ಲ. ಹೀಗಾಗಿ ಸತ್ಯ ಹಾಗೂ ನ್ಯಾಯಕ್ಕಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ. ದೂರಿನಲ್ಲಿ ಉಲ್ಲೇಖಿಸಿರುವ ಘಟನೆ ನಡೆದಿಲ್ಲ. ಇದು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ಮುಂದಿನ ಎಲ್ಲಾ ನಡೆ ಕಾನೂನಾತ್ಮಕವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…