Featured

ಲೈಂಗಿಕ ದೌರ್ಜನ್ಯ ಪ್ರಕರಣ :  ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ :  ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ  ತಂದೆ, ಮಾಜಿ ಸಚಿವ ಹೆಚ್​ಡಿ ರೇವಣ್ಣ  ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್​ ಮೆಜಿಸ್ಟ್ರೇಟ್​ ಕೋರ್ಟ್​ (ಎಸಿಎಂಎಂ) ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್, ಒಬ್ಬ ಶ್ಯೂರಿಟಿ ಒದಗಿಸುವಂತೆ ಹೇಳಿ ನ್ಯಾ. ಜೆ ಪ್ರೀತ್ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. ಈ ಹಿಂದೆ ಶಿವರಾಜ್ ಎಂಬುವರ ಶ್ಯೂರಿಟಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಪೀಠ ಸೆಕ್ಷನ್​ 354ಎ, 354ಡಿ, 506, 509 ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ​​​ಹಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದು ಎಂದು 42ನೇ ಎಸಿಎಂಎಂ ಕೋರ್ಟ್​ ನ್ಯಾಯಾಧೀಶೆ ಜೆ.ಪ್ರೀತ್ ಹೇಳಿದ್ದಾರೆ.

ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಏಪ್ರಿಲ್​ 28 ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ನೇಮಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯ ಹೇಳಿಕೆ ಪಡೆಯಿತು. ಈ ವೇಳೆ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್‌ಐಟಿ ಸೇರಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಆಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

19 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

20 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago