ಬೆಂಗಳೂರು: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ತಂದೆ, ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮೆಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್, ಒಬ್ಬ ಶ್ಯೂರಿಟಿ ಒದಗಿಸುವಂತೆ ಹೇಳಿ ನ್ಯಾ. ಜೆ ಪ್ರೀತ್ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. ಈ ಹಿಂದೆ ಶಿವರಾಜ್ ಎಂಬುವರ ಶ್ಯೂರಿಟಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಪೀಠ ಸೆಕ್ಷನ್ 354ಎ, 354ಡಿ, 506, 509 ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಹಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದು ಎಂದು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಹೇಳಿದ್ದಾರೆ.
ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಏಪ್ರಿಲ್ 28 ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ನೇಮಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯ ಹೇಳಿಕೆ ಪಡೆಯಿತು. ಈ ವೇಳೆ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್ಐಟಿ ಸೇರಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಆಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…