Featured

ಲೈಂಗಿಕ ದೌರ್ಜನ್ಯ ಪ್ರಕರಣ :  ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ :  ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ  ತಂದೆ, ಮಾಜಿ ಸಚಿವ ಹೆಚ್​ಡಿ ರೇವಣ್ಣ  ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್​ ಮೆಜಿಸ್ಟ್ರೇಟ್​ ಕೋರ್ಟ್​ (ಎಸಿಎಂಎಂ) ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್, ಒಬ್ಬ ಶ್ಯೂರಿಟಿ ಒದಗಿಸುವಂತೆ ಹೇಳಿ ನ್ಯಾ. ಜೆ ಪ್ರೀತ್ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. ಈ ಹಿಂದೆ ಶಿವರಾಜ್ ಎಂಬುವರ ಶ್ಯೂರಿಟಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಪೀಠ ಸೆಕ್ಷನ್​ 354ಎ, 354ಡಿ, 506, 509 ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ​​​ಹಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದು ಎಂದು 42ನೇ ಎಸಿಎಂಎಂ ಕೋರ್ಟ್​ ನ್ಯಾಯಾಧೀಶೆ ಜೆ.ಪ್ರೀತ್ ಹೇಳಿದ್ದಾರೆ.

ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಏಪ್ರಿಲ್​ 28 ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ನೇಮಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯ ಹೇಳಿಕೆ ಪಡೆಯಿತು. ಈ ವೇಳೆ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್‌ಐಟಿ ಸೇರಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಆಗಿದೆ.

Vishwa News 24

Recent Posts

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

10 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

28 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

37 minutes ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

43 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

60 minutes ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

1 hour ago