Featured

ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ??

ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ..

ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು..

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಪ್ರಶ್ನಿಸಿದೆ.

ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜೆಡಿಎಸ್ ಕಾಂಗ್ರೆಸ್ ನಾಯಕರ ವಿರುದ್ಧ ಬೊಟ್ಟು ಮಾಡಿದೆ.

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು.. ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ.

ಇದನ್ನೂ ಓದಿ : ಡಿ.ಕೆ.ಶಿ ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ : ಜೆ.ಸಿ.ಮಾಧುಸ್ವಾಮಿ -Vishwanews24

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು.

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.

ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

8 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

8 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

9 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

9 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

9 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

11 hours ago