Featured

ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ??

ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ..

ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು..

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಪ್ರಶ್ನಿಸಿದೆ.

ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜೆಡಿಎಸ್ ಕಾಂಗ್ರೆಸ್ ನಾಯಕರ ವಿರುದ್ಧ ಬೊಟ್ಟು ಮಾಡಿದೆ.

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು.. ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ.

ಇದನ್ನೂ ಓದಿ : ಡಿ.ಕೆ.ಶಿ ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ : ಜೆ.ಸಿ.ಮಾಧುಸ್ವಾಮಿ -Vishwanews24

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು.

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.

ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

17 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago