ಸಿಡ್ನಿ: ಲೈಂಗಿನ ದೌರ್ಜನ್ಯ ಪ್ರಕರಣದಡಿಯಲ್ಲಿ ಸಿಲುಕಿ ಆಸ್ಟ್ರೇಲಿಯಾದಲ್ಲಿ ಪೊಲೀಸರ ಅತಿಥಿಯಾಗಿರುವ ಶ್ರೀಲಂಕಾ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಲಂಕಾ ಕ್ರಿಕೆಟ್ ನಿಂದ ಅಮಾನತು ಮಾಡಲಾಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿಯು ಈ ಬಗ್ಗೆ ಇಂದು ತೀರ್ಮಾನಿಸಿದೆ.
ತಕ್ಷಣವೇ ಜಾರಿಗೆ ಬರುವಂತೆ ರಾಷ್ಟ್ರೀಯ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್ನಿಂದ ಅಮಾನತುಗೊಳಿಸಲು ಮಂಡಳಿ ನಿರ್ಧರಿಸಿದೆ. ಅವರನ್ನು ಯಾವುದೇ ಆಯ್ಕೆಗಳಿಗೆ ಪರಿಗಣಿಸುವುದಿಲ್ಲ ಎಂದು ವರದಿ ತಿಳಿಸಿದೆ.
ಲಂಕಾದ ಕ್ರಿಕೆಟ್ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ರವಿವಾರ ಬೆಳಗ್ಗೆ ಸಿಡ್ನಿ ಪೊಲೀಸರು ಟೀಂ ಹೋಟೆಲ್ ನಿಂದ ಬಂಧಿಸಿದ್ದರು. ಮಹಿಳೆಯೊಬ್ಬರಿಗೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಗುಣತಿಲಕ ಬಂಧನವಾಗಿದೆ. ವಿಶ್ವಕಪ್ ನಿಂದ ಹೊರಬಿದ್ದಿರುವ ಲಂಕಾ ತಂಡವು ಗುಣತಿಲಕ ಅವರನ್ನು ಬಿಟ್ಟು ಶ್ರೀಲಂಕಾಗೆ ಪ್ರಯಾಣಿಸಿದೆ.
ಚಂದ್ರಗ್ರಹಣ – ಹಲವು ದೇವಾಲಯಗಳಲ್ಲಿ ಪ್ರವೇಶ ನಿರ್ಬಂಧ
ಗುಣತಿಲಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಜಾಮೀನು ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ದನುಷ್ಕ ಗುಣತಿಲಕ ಮತ್ತು ಅತ್ಯಾಚಾರ ಆರೋಪ ಮಾಡಿರುವ ಮಹಿಳೆಯ ನಡುವೆ ಡೇಟಿಂಗ್ ಆಯಪ್ ವೊಂದರಲ್ಲಿ ಬಹಳ ದಿನಗಳಿಂದ ಮಾತುಕತೆ ನಡೆದಿದೆ. ನ.2ರಂದು ರೋಸ್ ಬೇನಲ್ಲಿರುವ ನಿವಾಸವೊಂದರಲ್ಲಿ ಇಬ್ಬರೂ ಒಟ್ಟಾಗಿದ್ದಾರೆ. ಆ ವೇಳೆ ಗುಣತಿಲಕ ತನ್ನನ್ನು ಅತ್ಯಾಚಾರ ಕ್ಕೊಳಪಡಿಸಿದ್ದಾರೆನ್ನುವುದು ಮಹಿಳೆಯ ಆರೋಪ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…