ಸಿಡ್ನಿ: ಲೈಂಗಿನ ದೌರ್ಜನ್ಯ ಪ್ರಕರಣದಡಿಯಲ್ಲಿ ಸಿಲುಕಿ ಆಸ್ಟ್ರೇಲಿಯಾದಲ್ಲಿ ಪೊಲೀಸರ ಅತಿಥಿಯಾಗಿರುವ ಶ್ರೀಲಂಕಾ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಲಂಕಾ ಕ್ರಿಕೆಟ್ ನಿಂದ ಅಮಾನತು ಮಾಡಲಾಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿಯು ಈ ಬಗ್ಗೆ ಇಂದು ತೀರ್ಮಾನಿಸಿದೆ.
ತಕ್ಷಣವೇ ಜಾರಿಗೆ ಬರುವಂತೆ ರಾಷ್ಟ್ರೀಯ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್ನಿಂದ ಅಮಾನತುಗೊಳಿಸಲು ಮಂಡಳಿ ನಿರ್ಧರಿಸಿದೆ. ಅವರನ್ನು ಯಾವುದೇ ಆಯ್ಕೆಗಳಿಗೆ ಪರಿಗಣಿಸುವುದಿಲ್ಲ ಎಂದು ವರದಿ ತಿಳಿಸಿದೆ.
ಲಂಕಾದ ಕ್ರಿಕೆಟ್ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ರವಿವಾರ ಬೆಳಗ್ಗೆ ಸಿಡ್ನಿ ಪೊಲೀಸರು ಟೀಂ ಹೋಟೆಲ್ ನಿಂದ ಬಂಧಿಸಿದ್ದರು. ಮಹಿಳೆಯೊಬ್ಬರಿಗೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಗುಣತಿಲಕ ಬಂಧನವಾಗಿದೆ. ವಿಶ್ವಕಪ್ ನಿಂದ ಹೊರಬಿದ್ದಿರುವ ಲಂಕಾ ತಂಡವು ಗುಣತಿಲಕ ಅವರನ್ನು ಬಿಟ್ಟು ಶ್ರೀಲಂಕಾಗೆ ಪ್ರಯಾಣಿಸಿದೆ.
ಚಂದ್ರಗ್ರಹಣ – ಹಲವು ದೇವಾಲಯಗಳಲ್ಲಿ ಪ್ರವೇಶ ನಿರ್ಬಂಧ
ಗುಣತಿಲಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಜಾಮೀನು ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ದನುಷ್ಕ ಗುಣತಿಲಕ ಮತ್ತು ಅತ್ಯಾಚಾರ ಆರೋಪ ಮಾಡಿರುವ ಮಹಿಳೆಯ ನಡುವೆ ಡೇಟಿಂಗ್ ಆಯಪ್ ವೊಂದರಲ್ಲಿ ಬಹಳ ದಿನಗಳಿಂದ ಮಾತುಕತೆ ನಡೆದಿದೆ. ನ.2ರಂದು ರೋಸ್ ಬೇನಲ್ಲಿರುವ ನಿವಾಸವೊಂದರಲ್ಲಿ ಇಬ್ಬರೂ ಒಟ್ಟಾಗಿದ್ದಾರೆ. ಆ ವೇಳೆ ಗುಣತಿಲಕ ತನ್ನನ್ನು ಅತ್ಯಾಚಾರ ಕ್ಕೊಳಪಡಿಸಿದ್ದಾರೆನ್ನುವುದು ಮಹಿಳೆಯ ಆರೋಪ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…